ಬಂಟ್ವಾಳ: ಬಿ.ಸಿ.ರೋಡಿನ ಟಯರ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕ, ಪಚ್ಚಿನಡ್ಕ ನಿವಾಸಿ ಪ್ರವೀಣ್(37) ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಆತ ಅವಿವಾಹಿತನಾಗಿದ್ದು, ವಿಪರೀತ ಅಮಲು ಪದಾರ್ಥ ಸೇವನೆಯ ಚಟ ಹೊಂದಿದ್ದ. ಕಳೆದ ಒಂದು ವಾರದಿಂದ ಅಮಲು ಪದಾರ್ಥವಿಲ್ಲದೆ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಸಂಶಯಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














