ಬೆಳ್ತಂಗಡಿ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ವೈಯಕ್ತಿಕ ಸೌಲಭ್ಯ ವಿತರಣಾ ಕಾರ್ಯಕ್ರಮ ನಡೆಯಿತು.



ಫಲಾನುಭವಿಗಳಿಗೆ ವೈಯಕ್ತಿಕ ಸೌಲಭ್ಯ ವಿತರಿಸುವುದರೊಂದಿಗೆ ಸಸಿ ವಿತರಣಾ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜಾ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖ್ಯಸ್ಥರು, ಗ್ರಾಮಸ್ಥರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.












