Thursday, February 13, 2025

ನನ್ನ ಮನೆಯ ಭೂತ- ಒಂದು ಅಧ್ಯಯನ ಕಾರ್ಯಕ್ರಮ ಉದ್ಘಾಟನೆ

ಸುಳ್ಯ: ತುಳುನಾಡಿನ ಆಚರಣೆಗಳಲ್ಲಿ ಮಹತ್ವದ ಸ್ಥಾನಪಡೆದಿರುವ ದೈವಾರಾಧನೆ ಕುರಿತು ವಿದ್ಯಾರ್ಥಿಗಳು ಅಧ್ಯಯನ ಕೈಗೊಳ್ಳುವುದು ಪ್ರಶಂಸನೀಯ ಎಂದು ಸುಳ್ಯ ಎನ್. ಎಂ .ಸಿ. ಕಾಲೇಜಿನ ಪ್ರಾಧ್ಯಾಪಕ ಡಾ. ಪೂವಪ್ಪ ಕಣಿಯೂರು ಹೇಳಿದರು.

ಇಂಡಿಯ ಫೌಂಡೇಶನ್ ಫಾರ್ ದಿ ಆರ್ಟ್ಸ್ ಬೆಂಗಳೂರು ಹಾಗೂ ಡಿ.ಎಸ್.ಇ ಆರ್.ಟಿ ಬೆಂಗಳೂರು ಇದರ ಸಹಯೋಗದಲ್ಲಿ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಗೊಂಡ ಕಲಿ-ಕಲಿಸು ಯೋಜನೆಯ ಶಿಕ್ಷಣದಲ್ಲಿ ಕಲಾಂತರ್ಗತ ಪ್ರಯೋಗ “ನನ್ನ ಮನೆಯ ಭೂತದ -ಒಂದು ಅಧ್ಯಯನ” ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ದೈವಿಕ ಭಾವದೊಂದಿಗೆ ನಡೆಯುವ ಭೂತಾರಾಧನೆಯನ್ನು ವಿದ್ಯಾರ್ಥಿಗಳು ಯಾವ ಬಗೆಯಲ್ಲಿ ಅಧ್ಯಯನ ನಡೆಸಬೇಕೆಂದು ಕಿವಿಮಾತು ಹೇಳಿದ ಅವರು, ಪ್ರತಿಯೊಬ್ಬರೂ ಅಧ್ಯಯನ ಶೀಲ ಮನಸ್ಸಿನೊಂದಿಗೆ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ರಾಜ್ಯ ಸಂಪನ್ಮೂಲ ವ್ಯಕ್ತಿ ಪ್ರಕಾಶ ಮೂಡಿತ್ತಾಯರು ಮಾತನಾಡಿ, ವಿದ್ಯಾರ್ಥಿಗಳು ಶಾಲಾ ಶಿಕ್ಷಣದ ಜೊತೆಯಲ್ಲಿ ಇಂತಹ ಕಲಿಕೆಗೆ ಅವಕಾಶಗಳು ಸಿಕ್ಕಾಗ ತಮ್ಮನ್ನು ತಾವು ಉತ್ಸಾಹದಿಂದ ತೊಡಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ಶಿಕ್ಷಕಿ ವಿಜಯಲಕ್ಷ್ಮಿ ಮಾತನಾಡಿ, ಐಎಫ್ಎ ಯಂತಹಾ ಸಂಸ್ಥೆಯ ಈ ಯೋಜನೆಗೆ ನಮ್ಮ ವಿದ್ಯಾಸಂಸ್ಥೆ ಆಯ್ಕೆಯಾಗಿರುವುದು ಸಂತಸ ತಂದಿದೆ, ಸರ್ವರ ಸಹಕಾರದೊಂದಿಗೆ ಯೋಜನೆ ಯಶಸ್ವಿಯಾಗಲಿ ಎಂದರು. ನನ್ನ ಮನೆಯ ಭೂತ- ಒಂದು ಅಧ್ಯಯನ ಯೋಜನೆಯ ಮಾರ್ಗದರ್ಶಿ ಶಿಕ್ಷಕಿ ಶ್ರೀಮತಿ ಮಮತಾ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಗಣಿತ ಶಿಕ್ಷಕಿ  ಪೂರ್ಣಿಮಾ ವಂದಿಸಿದರು. ವಿಜ್ಞಾನ ಶಿಕ್ಷಕ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...