Monday, February 2, 2026

ಹೆಣ್ಣುಮಕ್ಕಳ ಸುರಕ್ಷಾ ಕಾರ್ಯಕ್ರಮ

ಕಲ್ಲಡ್ಕ:  ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಣ್ಣುಮಕ್ಕಳ ಸುರಕ್ಷಾ ಕಾರ್ಯಕ್ರಮ ನಡೆಯಿತು. ಮಾತೃಭಾರತಿ ಸಮಿತಿಯ ಸದಸ್ಯರಾದ ಮಮತಾ ಮಾತಾಜಿಯವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಪೌಢಾವಸ್ಥೆಗೆ ಬಂದಾಗ ದೇಹದಲ್ಲಿ ಉಂಟಾಗುವ ಬದಲಾವಣೆ, ದೈಹಿಕ ಹಾಗೂ ಮಾನಸಿಕ ಸ್ವಚ್ಛತೆ, ಅಪರಿಚಿತರೊಂದಿಗೆ ತಮ್ಮ ವರ್ತನೆ, ಮಾನಸಿಕ ನಿಯಂತ್ರಣದೊಂದಿಗೆ ಹೆಣ್ಣುಮಕ್ಕಳ ಸಮಸ್ಯೆಯ ಪರಿಹಾರದ ಬಗ್ಗೆ ತಿಳಿಸಿದರು.


ಹೆಣ್ಣುಮಕ್ಕಳ ಸುರಕ್ಷೆಯ ನಿಟ್ಟಿನಲ್ಲಿ ಶಾಲೆಯ ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನೊಳಗೊಂಡ ಸುರಕ್ಷಾ ಸಮಿತಿಯನ್ನು ರಚಿಸಲಾಯಿತು.
ವೇದಿಕೆಯಲ್ಲಿ ಮಾತೃಭಾರತಿಯ ಸದಸ್ಯರು ,ಮತ್ತುಪೋಷಕರಾದ ಮಮತಾ ಎಸ್ ಶೆಟ್ಟಿ, ರಾಜೀವಿ, ಸ್ವಾತಿ, ಸಂಧ್ಯಾರಾಣಿ ಮತ್ತು ಪವಿತ್ರರವರು ಉಪಸ್ಥಿತಿಯಿದ್ದರು.
ಕಾರ್ಯಕ್ರಮವನ್ನು ಶಿಕ್ಷಕರಾದ ಶಶಿಕಲಾ ನಿರೂಪಿಸಿ, ಅನ್ನಪೂರ್ಣ ಸ್ವಾಗತಿಸಿ ವಂದಿಸಿದರು

More from the blog

ಕೇಂದ್ರ ಬಜೆಟ್ 2026-27: ಸರ್ವೋದಯದ ಸಕಾರಾತ್ಮಕ ಬಜೆಟ್..

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್‌ನ್ನು ಮಂಡಿಸಿದ್ದಾರೆ. ಈ ಬಜೆಟ್ ಭಾರತದ ಆರ್ಥಿಕ ಬೆಳವಣಿಗೆಗೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ. "ವಿಕಸಿತ ಭಾರತ" ದ ಮಹಾತ್ವಾಕಾಂಕ್ಷೆಯನ್ನು...

Vittla : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಹಲ್ಲೆ – ಆರೋಪಿಗಳು ವಶಕ್ಕೆ

ವಿಟ್ಲ : ವ್ಯಕ್ತಿಯೋರ್ವರು ಮಾರ್ನಮಿಗುಡ್ಡೆ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಮೂವರು ಅಪರಿಚಿತ ಮುಸುಕುಧಾರಿಗಳು ತಡೆದು ಹಲ್ಲೆ ನಡೆಸಿ, ಕೈಯಿಂದ ಮತ್ತು ಕಟ್ಟಿಗೆ ತುಂಡಿನಿಂದ ಹೊಡೆದು ಗಾಯಗೊಳಿಸಿ, ಅವರ ಬಳಿ ಇದ್ದ ಮೊಬೈಲ್...

Vittla : ನ್ಯಾಯವಾದಿಯ ಮನೆಗೆ ನುಗ್ಗಿ ಕಳ್ಳತನ..

ವಿಟ್ಲ: ನ್ಯಾಯವಾದಿಯೊಬ್ಬರ ಮನೆಗೆ ನುಗ್ಗಿ ಕಳ್ಳರು ಕಳ್ಳತನ ನಡೆಸಿದ ಘಟನೆ ವಿಟ್ಲದ ಒಕ್ಕೆತ್ತೂರು ರೋಯಲ್ ವಿಲ್ಲಾ ಸಮೀಪ ನಡೆದಿದೆ. ಅಡ್ವಕೇಟ್ ಸಫಿಯಾ ನೌಫಲ್ ಅವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಮನೆಮಂದಿ ಎಲ್ಲ ಒಂದು ತಿಂಗಳ...

Bantwal : ನೀರು ಕೇಳುವ ನೆಪದಲ್ಲಿ ವೃದ್ಧೆಯ ಕರಿಮಣಿ ಸರ ಎಗರಿಸಿದ ಕಳ್ಳ – ಪ್ರಕರಣ ದಾಖಲು

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವ ನೀರು ಕೇಳುವ ನೆಪದಲ್ಲಿ ವೃದ್ಧ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಕರಿಮಣಿ ಸರವನ್ನು ಎಳೆದೊಯ್ದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಗ್ಗ ಸಮೀಪದ...