Sunday, July 13, 2025

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜಮುಖಿ ಕಾರ್ಯ: ಐಕಳ ಹರೀಶ್ ಶೆಟ್ಟಿ

ಸುರತ್ಕಲ್: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜಮುಖಿ ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಲಿದೆ. ಅದಕ್ಕೆ ಎಲ್ಲರ ಸಹಕಾರವೂ ಬೇಕಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.
ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಕಾರದಲ್ಲಿ ಚೇಳ್ಯಾರ್ ಖಂಡಿಗೆ ಮತ್ತು ಬಾಳ ಒಟ್ಟೆಕಾಯರ್‌ನಲ್ಲಿ ನಿರ್ಮಿಸಿದ ಎರಡು ಮನೆಗಳಿಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು.
ಸಮಾಜದಲ್ಲಿ ಬಡವರನ್ನು ಗುರುತಿಸಿ ವಿದ್ಯಾಭ್ಯಾಸಕ್ಕೆ, ವೈದ್ಯಕೀಯಕ್ಕೆ ಹಾಗೂ ಮನೆ ನಿರ್ಮಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ಸಹಾಯ ಮಾಡುತ್ತಾ ಬಂದಿದೆ. ಅಲ್ಲದೇ ಬಡವರಿಗೆ ಮನೆಯನ್ನು ನಿರ್ಮಿಸಿಕೊಡುವ ಕೆಲಸ ಕಾರ್ಯಗಳೂ ನಡೆದಿದೆ ಎಂದು ಅವರು ತಿಳಿಸಿದರು. ಬೇರೆ ಬೇರೆ ಬಂಟರ ಸಂಘಗಳಿಂದ ಬರುತ್ತಿರುವ ಅರ್ಜಿಗಳನ್ನು ಪರಿಶೀಲಿಸಿ ನೆರವು ನೀಡಲಾಗುತ್ತಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು.


ಚೇಳ್ಯಾರ್ ಖಂಡಿಗೆ ನಿವಾಸಿ ಹರೀಶ್ ಶೆಟ್ಟಿ ಮತ್ತು ಬಾಳ ಒಟ್ಟೆಕಾಯರ್ ನಿವಾಸಿ ವಿಜಯಲಕ್ಷ್ಮೀ ಶೆಟ್ಟಿ ಅವರಿಗೆ ಕಟ್ಟಿ ಕೊಡಲಾದ ಮನೆಯನ್ನು ಹಸ್ತಾಂತರಿಸಲಾಯಿತು. ಮನೆಯ ಕೀ ಯನ್ನು ಸುರತ್ಕಲ್ ಬಂಟರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಕಳ ಹರೀಶ್ ಶೆಟ್ಟಿ ನೀಡಿದರು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ ದಾಸ ಶೆಟ್ಟಿ, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜಾ ಹೊಸಬೆಟ್ಟು, ಉಪಾಧ್ಯಕ್ಷ ನವೀನ್ ಶೆಟ್ಟಿ ಪಡ್ರೆ, ಕಾರ್ಯದಶಿ ಲೋಕಯ್ಯ ಶೆಟ್ಟಿ ಮುಂಚೂರು, ಮಾಜಿ ಅಧ್ಯಕ್ಷ ಎಂ. ದೇವಾನಂದ ಶೆಟ್ಟಿ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಖಂಡಿಗೆಬೀಡು ಆದಿತ್ಯ ಮುಕಾಲ್ದಿ, ಬಂಟರ ಸಂಘದ ಪದಾಧಿಕಾರಿಗಳಾದ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಸುಧಾಕರ ಶೆಟ್ಟಿ ಚೆಳ್ಯಾರು, ಪ್ರವೀಣ್ ಶೆಟ್ಟಿ , ರತ್ನಾಕರ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಬೇಬಿ ಶೆಟ್ಟಿ, ಕಾರ್ಯದರ್ಶಿ ಚಿತ್ರಾ ಜೆ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...