ಬೆಂಗಳೂರು, ಅ.18: ಹೆಬ್ಬಾಳ ಕ್ಷೇತ್ರದ ಶಾಸಕ ಬೈರತಿ ಸುರೇಶ್ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಚೂರಿ ಇರಿದು ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎನ್ನಲಾಗಿದೆ.

ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿ ಚೂರಿ ಇರಿದು ಕೊಲೆಗೈಯ್ಯಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಶಾಸಕರ ಕಾರಿಗೆ ತನ್ನ ಬೈಕ್ ತಾಗಿದ ಬಳಿಕ ವ್ಯಕ್ತಿಯು ಏಕಾಏಕಿ ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆ ವ್ಯಕ್ತಿಯನ್ನು ಶಾಸಕರ ಗನ್ ಮ್ಯಾನ್ ಗಳು ಹಿಡಿದಿದ್ದಾರೆ.

