Wednesday, July 9, 2025

ಕಠಿಣ ಪರಿಶ್ರಮವೇ ಸಾಧನೆಗೆ ಪ್ರೇರಣೆ: ಫಾದರ್ ಗ್ರೆಗರಿ

 

ಬಂಟ್ವಾಳ : ಕಠಿಣ ಪರಿಶ್ರಮವೇ ಸಾಧನೆಗೆ ಪ್ರೇರಣೆ ಎಂದು ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚಿನ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ ಹೇಳಿದರು .
ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಚರ್ಚ್ ನ ಆಶ್ರಯದಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತ್ಯುನ್ನತ ಅಂಕಪಡೆದ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿಯರಾದ ಅಲಿಸಿಯಾ ಲೀಮಾ ಪಿರೇರಾ(ವಾಣಿಜ್ಯ97.3) ಹಾಗೂ ಮೆಲಿಟಾ ಪಾಯ್ಸ್ (ವಿಜ್ಞಾನ 95.16) ರನ್ನು ಅಭಿನಂದಿಸಿ ಅವರು ಮಾತನಾಡಿದರು.
ನಮ್ಮ ಚರ್ಚ್ ವ್ಯಾಪ್ತಿಯ ಈ ಇಬ್ಬರು ವಿದ್ಯಾರ್ಥಿನಿಯರ ಸಾಧನೆ ನಮ್ಮ ಚರ್ಚ್ ಗೂ ಕೀರ್ತಿಯನ್ನು ತಂದಿದೆ, ಚರ್ಚ್ ನ ವೈಸಿಎಸ್ ಘಟಕದ ಅಧ್ಯಕ್ಷ,ಪದಾಧಿಕಾರಿಗಳ ಹುದ್ದೆಯನ್ನೂ ಇಬ್ಬರು ವಿದ್ಯಾರ್ಥಿನಿಯರು ಸೇವಾ ಮನೋಭಾವನೆಯಿಂದ ನಿರ್ವಹಿಸುತ್ತಿದ್ದು, ಇವರ ಶ್ರಮಕ್ಕೆ ಸಿಕ್ಕ ಗೌರವ ಇದಾಗಿದೆ ಎಂದು ಫಾದರ್ ಗ್ರೆಗರಿ ಹೇಳಿದರು.


ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಎಲಿಯಾಸ್ ಪಿರೇರಾ, ಕಾನ್ವೆಂಟ್ ಮುಖ್ಯಸ್ಥೆ ಸಿಸ್ಟರ್ ನ್ಯಾನ್ಸಿ ಶುಭಾಹಾರೈಸಿದರು. ವಿದ್ಯಾರ್ಥಿನಿ ಅಲಿಸಿಯಾ ಳ‌ ತಂದೆ ಅವಿಲ್ ಹಾಗೂ ತಾಯಿ ಲೀಡಿಯಾ ಪಿರೇರಾ, ವಿದ್ಯಾರ್ಥಿನಿ ಮೆಲಿಟಾ ತಂದೆ ಮಾರ್ಸೆಲ್ , ತಾಯಿ ಲೀನಾ ಪಾಯ್ಸ್ ಮಕ್ಕಳ ಸಾಧನೆ ಕುರಿತು ಹೆಮ್ಮೆ ಇದೆ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರೂ ಕೂಡ ನಮ್ಮ ಮಕ್ಕಳಿಗೆ ದೂರವಾಣಿ ಮೂಲಕ ಅಭಿನಂದಿಸಿ ಶುಭಹಾರೈಸಿರುವುದು ಖುಷಿ ಕೊಟ್ಟಿದೆ ಎಂದರು. ಚರ್ಚ್ ಪಾಲನಾ‌ ಸಮಿತಿ ಕಾರ್ಯದರ್ಶಿ ಮೇರಿ ಡಿ’ಸೋಜ, ಸೂರಿಕುಮೇರು ಸೈಂಟ್ ಜೋಸೆಫ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಖ್ಯಶಿಕ್ಷಕಿ ಸಿಸ್ಟರ್ ಲೊವಿಟಾ, ಸ್ಟೀವನ್ ಪಾಯ್ಸ್, ಅನಿತಾ ರೋಶನ್ ಮಾರ್ಟಿಸ್ ಉಪಸ್ಥಿತರಿದ್ದರು. ಚರ್ಚ್ ಪಾಲನಾ ಸಮಿತಿಯ ಮಾಜಿ ಉಪಾಧ್ಯಕ್ಷ ರೋಶನ್ ಬೊನಿಫಾಸ್ ಮಾರ್ಟಿಸ್ ಕಾರ್ಯಕ್ರಮ ‌ನಿರ್ವಹಿಸಿದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...