Wednesday, July 9, 2025

ಸೂರ್ಯ: ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಎಲ್.ಕೆ.ಜಿ ವಿಭಾಗ ಆರಂಭ

ವಿಟ್ಲ: ಸೂರ್ಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ನಡೆಯಿತು. ಮೈಸೂರು ಎಸ್‌ಎಲ್‌ವಿ ಬುಕ್ಸ್ ಏಜೆನ್ಸಿಯ ಮಾಲಕರಾದ ದಿವಾಕರ ನೇರ್ಲಾಜೆಯವರು ಒದಗಿಸಿರುವ 37,850 ರೂಗಳ ಶಾಲಾ ಬರವಣಿಗೆ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ, ಅವರ ಸಹೋದರ ಸುರೇಶ್ ನೇರ್ಲಾಜೆ ವಿತರಿಸಿದರು. ಇದರೊಂದಿಗೆ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಆರಂಭ ಕಾರ್‍ಯಕ್ರಮ ನಡೆಯಿತು.
ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಆಡಳಿತ ಮೊಕ್ತೆಸರರಾದ ಸುರೇಶ್ ಮುಕ್ಕುಡ ಎಲ್‌ಕೆಜಿ ವಿಭಾಗ ಉದ್ಘಾಟಿಸಿದರು. ಇಡ್ಕಿದು ಪಂಚಾಯಿತಿ ಅಧ್ಯಕ್ಷೆ ಚಂದ್ರಾವತಿ ರೈ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಪ್ರಫುಲ್ಲಚಂದ ಕೋಲ್ಪ್ರೆ, ಗ್ರಾಮ ಪಂಚಾಯಿತಿ ಸದಸ್ಯರಾದ ಸತೀಶ್ ಕೆಂರ್ದೆಲ್, ಹಿಮಕರ ನೇರ್ಲಾಜೆ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮೋನಪ್ಪ, ಉಪಾಧ್ಯಕ್ಷರಾದ ಪುಷ್ಪಾವತಿ, ಪ್ರೌಢಶಾಲಾ ಮುಖ್ಯಶಿಕ್ಷಕಿ ಸುಮಂಗಲಿ ಎಸ್, ಕಂಬಳಬೆಟ್ಟು ಕ್ಲಸ್ಟರ್ ಸಿ.ಆರ್.ಪಿ ಕೆ.ಕೆ ಮಾಸ್ಟರ್ ಹಾಜರಿದ್ದರು. ವಿನುತಾ ಸ್ವಾಗತಿಸಿದರು. ಶಾಲಾ ಮುಖ್ಯಶಿಕ್ಷಕಿ ಡೊರೀನ ಡಿ’ಸೋಜ ವಂದಿಸಿದರು. ಶ್ರೀಪತಿ ನಾಯಕ್ ಕಾರ್‍ಯಕ್ರಮ ನಿರೂಪಿಸಿದರು.

 

 

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...