Saturday, June 28, 2025

ಫೆ..24-25: ವಿಟ್ಲದಲ್ಲಿ ಸ್ವಸ್ತಿಕ್ ಕಲೋತ್ಸವ

ವಿಟ್ಲ: ವಿಟ್ಲ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಫೆ.24 ಮತ್ತು 25ರಂದು ಸ್ವಸ್ತಿಕ್ ಕಲೋತ್ಸವ ಆಯೋಜಿಸಲಾಗಿದೆ ಎಂದು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ತಾರಾನಾಥ ವಿಟ್ಲ ತಿಳಿಸಿದರು.

ವಿಟ್ಲದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡು ದಿನಗಳ ಕಾರ್ಯಕ್ರಮದಲ್ಲಿ ಸಸ್ಯಲೋಕ, ಆಹಾರಮೇಳ ಹಾಗೂ ಅಂತರರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಬಡ್ಡಿ ಪಂದ್ಯಾಟದಲ್ಲಿ ಆಯ್ದ ರಾಜ್ಯ, ಅಂತಾರಾಜ್ಯ ಮಟ್ಟದ ಹದಿನಾರು ತಂಡಗಳು ಪಾಲ್ಗೊಳ್ಳಲಿವೆ ಎಂದರು.

ಸಮಾರಂಭಕ್ಕೆ ಸಂಸದ ನಳಿನ್ ಕುಮಾರ್ ಕಟೀಲು, ಸತೀಶ್ ಕುಂಪಲ, ರಾಜ್ಯ ಸಭಾ ಸದಸ್ಯ ಜಗ್ಗೇಶ್, ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಮೊದಲಾದವರು ಭಾಗವಹಿಸಲಿದ್ದಾರೆ.

ಕದ್ರಿಯ ನಂದಗೋಕುಲ ತಂಡದಿಂದ, ಕಲ್ಲಡ್ಕದ ಕಲಾ ತಂಡ, 25 ರಂದು ಮೂಡುಬಿದಿರೆ ಆಳ್ವಾಸ್ ಕಲಾ ತಂಡದಿಂದ ಸಾಂಸ್ಕೃತಿಕ ವೈವಿಧ್ಯ ಜರಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಶ್ವನಾಥ ಅಳಿಕೆ, ಪ್ರಕಾಶ್, ನಾಗೇಶ್ ಮೊದಲಾದವರು ಉಪಸ್ಥಿತರಿದ್ದರು.

More from the blog

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ರಾಜ್ಯ ಸರಕಾರದ ಜನವಿರೋಧಿ ನೀತಿ ಖಂಡಿಸಿ ನೆಟ್ಲಮುಡ್ನೂರು ಗ್ರಾ. ಪಂ ಮುಂಭಾಗದಲ್ಲಿ ಪ್ರೊಟೆಸ್ಟ್..

ಬಂಟ್ವಾಳ :  ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ನೆಟ್ಲ ಮುಡ್ನೂರು ಶಕ್ತಿ ಕೇಂದ್ರದ ವತಿಯಿಂದ ನೆರಳಕಟ್ಟೆ(ಗಣೇಶ ನಗರ) ಪಂಚಾಯತ್ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ...

ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ವಿಟ್ಲ: ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿರುವ 18 ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿ...