Wednesday, July 9, 2025

ಸಾರ್ವಕಾಲಿಕ ಮಹತ್ವವನ್ನು ಷೇಕ್ಸ್‌ಪಿಯರ್ ನಾಟಕಗಳು ಪಡೆದುಕೊಂಡಿವೆ: ಸುದರ್ಶನ್

ಬಂಟ್ವಾಳ: ಸಾಹಿತ್ಯ ಕ್ಷೇತ್ರದಲ್ಲಿ ನಾಟಕ ಪ್ರಕಾರವು ಅತೀ ಪ್ರಾಚೀನವಾದುದು. ಷೇಕ್ಸ್‌ಪಿಯರ್ ನಂತಹ ಆಂಗ್ಲ ನಾಟಕಕಾರರು ನಾಟಕ ಕ್ಷೇತ್ರದಲ್ಲೇ ಹೆಸರನ್ನು ಗಳಿಸಿದವರು. ಷೇಕ್ಸ್‌ಪಿಯರ್ ನಾಟಕಗಳ ತರುವಾಯ ಇತರ ಭಾಷೆಗಳಲ್ಲಿ ನಾಟಕ ಪ್ರಕಾರವು ಬೆಳೆಯಿತು. ಸಾರ್ವಕಾಲಿಕ ಮಹತ್ವವನ್ನು ಷೇಕ್ಸ್‌ಪಿಯರ್ ನಾಟಕಗಳು ಪಡೆದುಕೊಂಡಿವೆ ಎಂದು ಬಂಟ್ವಾಳದ ಎಸ್.ವಿ.ಎಸ್ ಪದವಿಪೂರ್ವ ಕಾಲೇಜಿನ ಆಂಗ್ಲ ಉಪನ್ಯಾಸಕ ಸುದರ್ಶನ್ ಹೇಳಿದರು.
ಅವರು ಇಂದು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಲೈಬ್ರೈರಿ ಕ್ಲಬ್ ಮತ್ತು ಇಂಗ್ಲೀಷ್ ಸಂಘಗಳ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಿವಿಸಿಟಿಂಗ್ ಷೇಕ್ಸ್‌ಪೀಯರ್ ಎಂಬ ವಿಷಯದ ಕುರಿತು ಮಾತನಾಡುತ್ತಿದ್ದರು. ಷೇಕ್ಸ್‌ಪಿಯರ್ ನಾಟಕಗಳು ಎಲ್ಲ ವರ್ಗದ ಜನರನ್ನು ಸೆಳೆಯಬಲ್ಲ ಗುಣವುಳ್ಳದು. ಅತೀ ರೋಮಾಂಚನಕಾರಿ ಸನ್ನಿವೇಶಗಳನ್ನು ನಿರೂಪಿಸುವ ಗುಣಗಳು ನಾಟಕಕಾರನ ವಿಶೇಷತೆ ಎಂದವರು ಹೇಳಿದರು.
ಉಪನ್ಯಾಸ ಕಾರ್ಯಕ್ರಮದ ಆರಂಭದಲ್ಲಿ ಷೇಕ್ಸ್‌ಪೀಯರ್ ಕೃತಿಗಳ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗನಾಯಕ್‌ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಉಪಪ್ರಾಂಶುಪಾಲರು ಮತ್ತು ಲೈಬ್ರೈರಿ ಕ್ಲಬ್ ಅಧ್ಯಕ್ಷರಾದ ಡಾ| ಎಚ್.ಆರ್. ಸುಜಾತ, ಇಂಗ್ಲೀಷ್ ಸಂಘದ ಅಧ್ಯಕ್ಷರಾದ ಶಾಂತಿ ರೋಚ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ನಾಗರಾಜ್ ಸ್ವಾಗತಿಸಿದರು.  ವಿನುತ ವಂದಿಸಿದರು.

 

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...