Tuesday, February 11, 2025

’ಕನಸು’ ಕವನ ಸಂಕಲನ ಪ್ರಥಮ, ’ಕಸದ ಪರಿವೆಯ ಒಳಗೆ’ ತೃತೀಯ ಸ್ಥಾನ

ಬಂಟ್ವಾಳ: ವಿಜಯ ಕಾಲೇಜು ಮೂಲ್ಕಿ ಇವರು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಯುವ ಪ್ರತಿಭೆಗಳನ್ನು ಗುರುತಿಸಲು ಏರ್ಪಡಿಸಿದ್ದ ಕವನ ಸ್ಪರ್ಧೆಯಲ್ಲಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ದ್ವಿತೀಯ ಬಿ.ಎ ಯ ಕವಿತಾ ಕೆ. ಇವರ ’ಕನಸು’ ಕವನವು ಪ್ರಥಮ ಸ್ಥಾನವನ್ನೂ..

ದ್ವಿತೀಯ ಬಿ.ಎಸ್ಸಿಯ  ಸ್ಪೂರ್ತಿ ಇವರ ’ಕಸದ ಪರಿವೆಯ ಒಳಗೆ’ ಕವನವು ತೃತೀಯ ಸ್ಥಾನವನ್ನು ಪಡೆದಿದೆ. ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...