Tuesday, February 11, 2025

ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ಎನ್.ಸಿ.ಸಿ ಘಟಕದ 50ರ ಸಂಭ್ರಮದ ಮಿಲಿಟರಿ ಏವರ್‌ನೆಸ್ ಕಾರ್ಯಕ್ರಮ

ಬಂಟ್ವಾಳ: ಪ್ರತಿ ವ್ಯಕ್ತಿಯಲ್ಲೂ ಸ್ವಾಭಿಮಾನ ಎನ್ನುವುದು ಇರಬೇಕು. ಅದು ವೈಯ್ಯಕ್ತಿಕವಾಗಿದ್ದು ನಂತರ ಸಾಮುದಾಯಕ ಸ್ವಾಭಿಮಾನವಾಗಿ ಮುಂದುವರಿದು ನಂತರ ದೇಶದ ಅಭಿಮಾನವಾಗಿ ಹೃದಯದಲ್ಲೂ ಸ್ಥಾಪಿತವಾಗಿರುತ್ತದೆ. ಈ ರೀತಿಯ ಅಭಿಮಾನ, ದೈರ್ಯ ಸ್ಥರ್ಯವುಳ್ಳವ ಮಾತ್ರ ದೇಶ ಕಾಯುವ ಸೈನಿಕನಾಗಲು ಸಾದ್ಯ. ಯಾವುದೇ ನಾಗರಿಕನೂ ಇಂದು ಸ್ವತಂತ್ರವಾಗಿ ನೆಮ್ಮದಿಯಿಂದ ಬದುಕುತ್ತಿದ್ದಾನೆ ಎಂದರೆ ಅದಕ್ಕೆ ಮೂಲ ಕಾರಣ ಸೈನಿಕರು ಎಂದು ಆರ್ಮಿ ರಿಕ್ರೂಟ್‌ಮೆಂಟ್ ಆಫೀಸ್ ಮಂಗಳೂರಿನ ನಿರ್ದೇಶಕರಾದ ಸೇನಾ ಮೆಡಲ್ ಪ್ರಶಸ್ತಿ ಪುರಸ್ಕೃತ ಕರ್ನಲ್‌ರಾಜ್ ಮನ್ನಾರ್ ಹೇಳಿದರು.
ಅವರು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ಎನ್.ಸಿ.ಸಿ ಘಟಕದ 50ರ ಸಂಭ್ರಮದ ಮಿಲಿಟರಿ ಏವರ್‌ನೆಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು ಸೈನ್ಯವನ್ನು ಸೇರಲು ಬೇಕಾದ ಅರ್ಹತೆಗಳು ಮತ್ತು ಸೈನಿಕ ವಲಯದಲ್ಲಿರುವ ವಿವಿಧ ಗ್ರೇಡ್‌ಗಳು ಹಾಗೂ ಸೈನಿಕರಿಗೆ ಸಿಗುವ ವಿವಿಧ ಸೌಲಭ್ಯಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇಂಡಿಯನ್ ಆರ್‍ಮಿಯಿಂದ ನಿವೃತ ಕ್ಯಾಪ್ಟನ್ ಡಾ| ಕೆ .ಜಿ. ಶೆಣೈಯವರು ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ನುಡಿಗಳೊಂದಿಗೆ ಅತಿಥಿಗಳ ಪರಿಚಯ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಮಾತನಾಡಿ ದೇಶ ಕಾಯುವ ಸೈನಿಕವಲಯದ ಮಾಹಿತಿ ತಿಳಿದುಕೊಳ್ಳವಲ್ಲಿ ಈ ಕಾರ್ಯಕ್ರಮ ಅರ್ಥಪೂರ್ಣವಾದದ್ದು ಎಂದರು .ನಂತರ ಸೈನಿಕರ ಕ್ಷೇತ್ರದ ವಿವಿಧ ಮೆಡಲ್‌ಗಳ ಪ್ರದರ್ಶನವನ್ನು ಉದ್ಘಾಟಿಸಲಾಯಿತು .
ಕಾಲೇಜಿನ ಉಪಪ್ರಾಂಶುಪಾಲರಾದ ಡಾ| ಎಚ್ ಆರ್ ಸುಜಾತ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಎನ್.ಸಿ.ಸಿ ಅಧಿಕಾರಿ ಲೆ| ಸುಂದರ್ ವಂದಿಸಿದರು. ಎನ್.ಸಿ.ಸಿ. ಕೆಡೆಟ್  ಕವನ ಕೆ. ನಾಯಕ್ ಕಾರ್ಯಕ್ರಮ ನಿರೂಪಿಸಿದರು.
ತಾಲೂಕಿನ ವಿವಿಧ ಶಾಲಾ ವಿಧ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು. ಕುಮಾರಿ ಮಾನಸ ಪ್ರಾರ್ಥಿಸಿದರು.

More from the blog

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...