Thursday, January 29, 2026

ವಿಶೇಷ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ: ಜೀವನ ನಿರ್ವಹಣೆಗೆ ಪೂರಕವಾದ ಉದ್ಯೋಗವನ್ನು ಆಯ್ದುಕೊಳ್ಳುವುದು ಇಂದು ಪ್ರತಿಯೊಬ್ಬನ ಅಗತ್ಯವಾಗಿದೆ. ಈ ಉದ್ಯೋಗದ ದಿಕ್ಕುದೆಸೆಗಳು ವಿದ್ಯಾರ್ಥಿ ಜೀವನದಲ್ಲೇ ಅರಿತಿರಬೇಕು. ಮತ್ತು ಅದಕ್ಕೆ ಅಗತ್ಯವಾದ ಪೂರಕವಾದ ಮಾಹಿತಿಯನ್ನು ಪಡೆದುಕೊಳ್ಳಬೇಕು. ಇಂದು ಉದ್ಯೋಗಗಳ ಆಯ್ಕೆಯು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನಡೆಯುತ್ತದೆ ಎಂದು ಮಂಗಳೂರಿನ ಸರ್ವಜ್ಞ ಐ.ಎ.ಎಸ್ ಎಕಾಡಮಿ ಇದರ ನಿರ್ದೇಶಕರಾದ ಸುರೇಶ್ ಎಂ. ಎಸ್. ಹೇಳಿದರು.
ಅವರು ಇಂದು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಮಾನವಿಕ ಸಂಘದ ಆಶ್ರಯದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಯಾವುದೇ ರೀತಿಯ ಪರೀಕ್ಷೆಗಳಾಗಲಿ ಅದನ್ನು ಲಘುವೆಂದು ಪರಿಗಣಿಸಬಾರದು. ಅದನ್ನು ಗಂಭಿರವಾಗಿ ಪರಿಭಾವಿಸಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಸಹಜ. ಉದ್ಯೋಗ ಗಳಿಸುವಲ್ಲಿ ಅದರಲ್ಲಿ ಪಡೆದ ಉತ್ತಮ ಅಂಕಗಳು ಅತೀ ಮುಖ್ಯ ಮಾನದಂಡವಾಗುತ್ತದೆ. ಇದಕ್ಕೆ ನಿರಂತರ ಪರಿಶ್ರಮ, ನಿರ್ದಿಷ್ಠವಾದ ಪೂರ್ವ ತಯಾರಿ ಅಗತ್ಯ ಎಂದವರು ಹೇಳಿದರು ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳು, ಅರ್ಹತೆ , ಕಲಿಕೆಯ ವಿಧಾನ ಇವುಗಳನ್ನು ಪ್ರಾತ್ಯಕ್ಷಿಕೆಗಳ ಮೂಲಕ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಮಾತನಾಡಿ ಉದ್ಯೋಗ ಗಳಿಸುವಲ್ಲಿ ಬೇಕಾದ ಪರೀಕ್ಷೆಗಳು, ಅದಕ್ಕೆ ಬೇಕಾದ ಮಾಹಿತಿ ಇವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಪಡೆಯಲೇಬೇಕು. ಮಾನವಿಕ ವಿಷಯಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳು ಅತೀ ಅಗತ್ಯವಾಗಿ ಈ ಮಾಹಿತಿ ತಿಳಿದಿರಬೇಕು ಎಂದವರು ಹೇಳಿದರು
ಮಾನವಿಕ ಸಂಘದ ಅಧ್ಯಕ್ಷೆ ಉಪನ್ಯಾಸಕಿ  ರೂಪಾ ಅತಿಥಿ ಪರಿಚಯದೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿ ಸುಷ್ಮಾ ವಂದಿಸಿದರು. ವಿಜೇತ ಕಾರ್ಯಕ್ರಮ ನಿರೂಪಿಸಿದರು ವಿದ್ಯಾರ್ಥಿ ಭರತ್ ಪ್ರಾರ್ಥಿಸಿದರು. ಮಾನವಿಕ ಸಂಘದ ಕಾರ್ಯದರ್ಶಿ ಯಜ್ಞೇಶ್ವರ್ ಉಪಸ್ಥಿತರಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...