Wednesday, July 9, 2025

ಎಸ್.ವಿ.ಎಸ್ ಕಾಲೇಜು ಬಂಟ್ವಾಳ ರೋಟರಾಕ್ಸ್ ಸನ್ನದು ಪ್ರದಾನ ಸಮಾರಂಭ ಹಾಗೂ ಕೌಶಲಾಭಿವೃದ್ಧಿ ತರಬೇತಿ

ಬಂಟ್ವಾಳ: ವರ್ತಮಾನದ ಮಾನವನ ಬದುಕು ಬಹುಮುಖವಾಗಿ ವಿಸ್ತರಣೆಗೊಳ್ಳತ್ತಿದೆ. ವೈಜ್ಞಾನಿಕತೆ ಬೆಳೆದಂತೆ ಮನುಷ್ಯ ತನ್ನ ಬದುಕಿನ ರೀತಿಯನ್ನು ಬಹುಮುಖಿಯಾಗಿ ವಿನ್ಯಾಸಗೊಳಿಸುತ್ತಾನೆ. ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿರುವ ಮಾನವನು ಕೌಶಲ ಕೇಂದ್ರಿತವಾಗಿ ಮುನ್ನಡೆಯುತ್ತಿದ್ದಾನೆ. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಹಂತದಲ್ಲೇ ಬದುಕಿಗೆ ಪೂರಕವಾದ ಕೌಶಲಗಳನ್ನು ರೂಧಿಸಿಕೊಳ್ಳವುದು ಅಗತ್ಯ. ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಕಾಯ್ದಕೊಳ್ಳಲು ಕೌಶಲ ಕೇಂದ್ರಿತ ಶಿಕ್ಷಣವು ಇವತ್ತಿನ ಅಗತ್ಯವಾಗಿದೆ. ಬೌದ್ದಿಕ ಚಟುವಟಿಕೆಯಾದ ಪಠ್ಯ ಕೇಂದ್ರಿತ ಶಿಕ್ಷಣದ ಜೊತೆಯಲ್ಲಿ ಸ್ವಾಸ್ಥ್ಯ ಮನಸ್ಸುಗಳನ್ನು ನಿರ್ಮಾಣಮಾಡಬಲ್ಲ ಕೌಶಲ ಕೇಂದ್ರಿತ ಶಿಕ್ಷಣವು ವರ್ತಮಾನದ ತುರ್ತಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಸದಸ್ಯ ಗೋಪಾಲ್ ಅಂಚನ್ ಅಭಿಪ್ರಾಯಪಟ್ಟರು.
ಅವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ರೋಟರಾಕ್ಸ್ ಸನ್ನದು ಪ್ರದಾನ ಸಮಾರಂಭ ಹಾಗೂ ಅರ್ಥಶ್ರಾಸ್ತ್ರ ವಿಭಾಗದ ಸಹಯೋಗದಲ್ಲಿ ನಡೆದ ಕೌಶಲಾಭಿವೃಧ್ಧಿ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ರೋಟರಿಕ್ಲಬ್‌ನ ವಲಯ ನಾಲ್ಕರ ವಲಯ ಕಾರ್ಯದರ್ಶಿಯಾಗಿರುವ ನಾರಾಯಣ ಹೆಗ್ಡೆ ರೋಟರಿ ಕ್ಲಬ್‌ನ ಸ್ವರೂಪ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.
ರೋಟರಿ ಕ್ಲಬ್ ಬಂಟ್ವಾಳ ಟೌನ್‌ನ ಅಧ್ಯಕ್ಷ ಉಮೇಶ್ ನಿರ್ಮಲ್ ಎಸ್ ವಿ ಎಸ್ ಕಾಲೇಜು ರೋಟರಾಕ್ಸ ಕ್ಲಬ್‌ನ ನೂತನ ಅಧ್ಯಕ್ಷ ವಿದ್ಯಾರ್ಥಿ ಕಾರ್ತಿಕ್‌ಗೆ ಸನ್ನದು ಪ್ರದಾನ ಮಾಡಿದರು
ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸೂಕ್ತ ತರಬೇತಿ ಮೂಲಕ ಪರಿಪೂರ್ಣ ವ್ಯಕ್ತಿತ್ವ ರೂಪುಗಳ್ಳುತ್ತದೆ ಎಂದರು.
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಸಕೀನಾ ನಾಝಿರ್ ಸ್ವಾಗತಿಸಿದರು. ವಿದ್ಯಾರ್ಥಿ ಭರತ್ ಪ್ರಾರ್ಥಿಸಿದರು. ರೋಟರಾಕ್ಸ್ ಕ್ಲಬ್‌ನ ಸಂಯೋಜಕ ಚೇತನ್ ಮುಂಡಾಜೆ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿನಿ ಪ್ರಜ್ಞಾ ಪಿ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...