Saturday, June 28, 2025

ವಿದ್ಯಾರ್ಥಿ ದೆಸೆಯಲ್ಲಿನ ನಡವಳಿಕೆ ಮುಂದಿನ ಜೀವನಕ್ಕೆ ದಾರಿದೀಪ: ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್

ಬಂಟ್ವಾಳ : ವಿದ್ಯಾರ್ಥಿ ಜೀವನ ಎನ್ನುವುದು ಭವಿಷ್ಯಕ್ಕೆ ರಹದಾರಿಯಿದ್ದಂತೆ. ಈ ಘಟ್ಟದಲ್ಲಿನ ನಮ್ಮ ನಡವಳಿಕೆ ನಮ್ಮ ಮುಂದಿನ ಜೀವನವನ್ನು ನಿರ್ಣಯಿಸಬಲ್ಲದು. ಇಂದಿನ ಸಾಧನೆ ಮುಂದಿನ ಬದುಕಿಗೆ ದಾರಿದೀಪವಾಗುತ್ತದೆ. ಆದುದರಿಂದ ಪ್ರತಿ ವಿದ್ಯಾರ್ಥಿ ನಿರಂತರ ಅಭ್ಯಾಸ ಮಾಡಬೇಕು ಎಂದು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಹೇಳಿದರು.

ಅವರು ಕಾಲೇಜಿನಲ್ಲಿ ನಡೆದ ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳಾದವರು ಜೀವನದಲ್ಲಿ ಶಿಸ್ತು ನಯ ವಿನಯಗಳನ್ನು ರೂಢಿಸಿಕೊಳ್ಳಬೇಕು. ಅದರಂತೆ ನಿರಂತರ ಜ್ಞಾನಾರ್ಜನೆಯ ಕಡೆ ಗಮನ ನೀಡಬೇಕು. ಇಲ್ಲಿ ಕಲಿತ ವಿದ್ಯಾರ್ಥಿಗಳು ನಿರಂತರ ರ್‍ಯಾಂಕ್ ಗಳಿಸಿರುತ್ತಾರೆ. ಇಂದು ದೇಶ ವಿದೇಶಗಳಲ್ಲಿ ಉದ್ಯೋಗದಲ್ಲಿದ್ದಾರೆ. ಅದಕ್ಕೆ ಅವರ ಸಾಧನೆಯ ಕಾರಣ. ವಿದ್ಯಾರ್ಥಿಗಳಾದವರು ಆಧುನಿಕ ತಂತ್ರಜ್ಞಾನವನ್ನು ದುರುಪಯೋಗವಾಗದಂತೆ ಬಳಸಿಕೊಳ್ಳಬೇಕು ಎಂದವರು ಕರೆಯಿತ್ತರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶ್ರೀ ರೊನಾಲ್ಡ್ ಡಿ ಸೋಜರವರು ಮಾತನಾಡಿ ಹೆತ್ತವರು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಾಲೇಜಿನ ಆಧಾರಸ್ತಂಭಗಳು, ಅಧ್ಯಾಪಕರನ್ನು ವಿದ್ಯಾರ್ಥಿಗಳು ಯಾವತ್ತೂ ಗೌರವಿಸಬೇಕು ಅದುವೇ ಅವರ ಸಾಧನೆ ಮತ್ತು ಪ್ರತಿಫಲಕ್ಕೆ ಶ್ರೀರಕ್ಷೆ ಎಂದರು.

ಕಾಲೇಜಿನ ಉಪಪ್ರಾಂಶುಪಾರಾದ ಡಾ. ಹೆಚ್ ಆರ್ ಸುಜಾತ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೋ ನಾರಾಯಣ ಭಂಡಾರಿ ವಂದಿಸಿದರು. ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಶಶಿಕಲಾ ಎಂ ಪಿ ಶಿಕ್ಷಕ ರಕ್ಷಕ ಸಂಘದ ಕಾರ್ಯಕಾರಿ ಸಮಿತಿ ರಚಿಸಿದರು. ಕನ್ನಡ ವಿಭಾಗ ಮುಖ್ಯಸ್ಥರಾದ ಶ್ರೀ ಶಿವಣ್ಣ ಪ್ರಭು ಕೆ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಕಾವ್ಯ ದಿವ್ಯಶ್ರೀ ಮತ್ತು ಪೂಜಾ ಪ್ರಾರ್ಥಿಸಿದರು.

More from the blog

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...