Tuesday, January 27, 2026

ವಿದ್ಯಾರ್ಥಿ ದೆಸೆಯಲ್ಲಿನ ನಡವಳಿಕೆ ಮುಂದಿನ ಜೀವನಕ್ಕೆ ದಾರಿದೀಪ: ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್

ಬಂಟ್ವಾಳ : ವಿದ್ಯಾರ್ಥಿ ಜೀವನ ಎನ್ನುವುದು ಭವಿಷ್ಯಕ್ಕೆ ರಹದಾರಿಯಿದ್ದಂತೆ. ಈ ಘಟ್ಟದಲ್ಲಿನ ನಮ್ಮ ನಡವಳಿಕೆ ನಮ್ಮ ಮುಂದಿನ ಜೀವನವನ್ನು ನಿರ್ಣಯಿಸಬಲ್ಲದು. ಇಂದಿನ ಸಾಧನೆ ಮುಂದಿನ ಬದುಕಿಗೆ ದಾರಿದೀಪವಾಗುತ್ತದೆ. ಆದುದರಿಂದ ಪ್ರತಿ ವಿದ್ಯಾರ್ಥಿ ನಿರಂತರ ಅಭ್ಯಾಸ ಮಾಡಬೇಕು ಎಂದು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಹೇಳಿದರು.

ಅವರು ಕಾಲೇಜಿನಲ್ಲಿ ನಡೆದ ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳಾದವರು ಜೀವನದಲ್ಲಿ ಶಿಸ್ತು ನಯ ವಿನಯಗಳನ್ನು ರೂಢಿಸಿಕೊಳ್ಳಬೇಕು. ಅದರಂತೆ ನಿರಂತರ ಜ್ಞಾನಾರ್ಜನೆಯ ಕಡೆ ಗಮನ ನೀಡಬೇಕು. ಇಲ್ಲಿ ಕಲಿತ ವಿದ್ಯಾರ್ಥಿಗಳು ನಿರಂತರ ರ್‍ಯಾಂಕ್ ಗಳಿಸಿರುತ್ತಾರೆ. ಇಂದು ದೇಶ ವಿದೇಶಗಳಲ್ಲಿ ಉದ್ಯೋಗದಲ್ಲಿದ್ದಾರೆ. ಅದಕ್ಕೆ ಅವರ ಸಾಧನೆಯ ಕಾರಣ. ವಿದ್ಯಾರ್ಥಿಗಳಾದವರು ಆಧುನಿಕ ತಂತ್ರಜ್ಞಾನವನ್ನು ದುರುಪಯೋಗವಾಗದಂತೆ ಬಳಸಿಕೊಳ್ಳಬೇಕು ಎಂದವರು ಕರೆಯಿತ್ತರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶ್ರೀ ರೊನಾಲ್ಡ್ ಡಿ ಸೋಜರವರು ಮಾತನಾಡಿ ಹೆತ್ತವರು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಾಲೇಜಿನ ಆಧಾರಸ್ತಂಭಗಳು, ಅಧ್ಯಾಪಕರನ್ನು ವಿದ್ಯಾರ್ಥಿಗಳು ಯಾವತ್ತೂ ಗೌರವಿಸಬೇಕು ಅದುವೇ ಅವರ ಸಾಧನೆ ಮತ್ತು ಪ್ರತಿಫಲಕ್ಕೆ ಶ್ರೀರಕ್ಷೆ ಎಂದರು.

ಕಾಲೇಜಿನ ಉಪಪ್ರಾಂಶುಪಾರಾದ ಡಾ. ಹೆಚ್ ಆರ್ ಸುಜಾತ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೋ ನಾರಾಯಣ ಭಂಡಾರಿ ವಂದಿಸಿದರು. ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಶಶಿಕಲಾ ಎಂ ಪಿ ಶಿಕ್ಷಕ ರಕ್ಷಕ ಸಂಘದ ಕಾರ್ಯಕಾರಿ ಸಮಿತಿ ರಚಿಸಿದರು. ಕನ್ನಡ ವಿಭಾಗ ಮುಖ್ಯಸ್ಥರಾದ ಶ್ರೀ ಶಿವಣ್ಣ ಪ್ರಭು ಕೆ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಕಾವ್ಯ ದಿವ್ಯಶ್ರೀ ಮತ್ತು ಪೂಜಾ ಪ್ರಾರ್ಥಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...