Thursday, February 13, 2025

ವಿದ್ಯಾರ್ಥಿ ದೆಸೆಯಲ್ಲಿನ ನಡವಳಿಕೆ ಮುಂದಿನ ಜೀವನಕ್ಕೆ ದಾರಿದೀಪ: ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್

ಬಂಟ್ವಾಳ : ವಿದ್ಯಾರ್ಥಿ ಜೀವನ ಎನ್ನುವುದು ಭವಿಷ್ಯಕ್ಕೆ ರಹದಾರಿಯಿದ್ದಂತೆ. ಈ ಘಟ್ಟದಲ್ಲಿನ ನಮ್ಮ ನಡವಳಿಕೆ ನಮ್ಮ ಮುಂದಿನ ಜೀವನವನ್ನು ನಿರ್ಣಯಿಸಬಲ್ಲದು. ಇಂದಿನ ಸಾಧನೆ ಮುಂದಿನ ಬದುಕಿಗೆ ದಾರಿದೀಪವಾಗುತ್ತದೆ. ಆದುದರಿಂದ ಪ್ರತಿ ವಿದ್ಯಾರ್ಥಿ ನಿರಂತರ ಅಭ್ಯಾಸ ಮಾಡಬೇಕು ಎಂದು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಹೇಳಿದರು.

ಅವರು ಕಾಲೇಜಿನಲ್ಲಿ ನಡೆದ ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳಾದವರು ಜೀವನದಲ್ಲಿ ಶಿಸ್ತು ನಯ ವಿನಯಗಳನ್ನು ರೂಢಿಸಿಕೊಳ್ಳಬೇಕು. ಅದರಂತೆ ನಿರಂತರ ಜ್ಞಾನಾರ್ಜನೆಯ ಕಡೆ ಗಮನ ನೀಡಬೇಕು. ಇಲ್ಲಿ ಕಲಿತ ವಿದ್ಯಾರ್ಥಿಗಳು ನಿರಂತರ ರ್‍ಯಾಂಕ್ ಗಳಿಸಿರುತ್ತಾರೆ. ಇಂದು ದೇಶ ವಿದೇಶಗಳಲ್ಲಿ ಉದ್ಯೋಗದಲ್ಲಿದ್ದಾರೆ. ಅದಕ್ಕೆ ಅವರ ಸಾಧನೆಯ ಕಾರಣ. ವಿದ್ಯಾರ್ಥಿಗಳಾದವರು ಆಧುನಿಕ ತಂತ್ರಜ್ಞಾನವನ್ನು ದುರುಪಯೋಗವಾಗದಂತೆ ಬಳಸಿಕೊಳ್ಳಬೇಕು ಎಂದವರು ಕರೆಯಿತ್ತರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶ್ರೀ ರೊನಾಲ್ಡ್ ಡಿ ಸೋಜರವರು ಮಾತನಾಡಿ ಹೆತ್ತವರು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಾಲೇಜಿನ ಆಧಾರಸ್ತಂಭಗಳು, ಅಧ್ಯಾಪಕರನ್ನು ವಿದ್ಯಾರ್ಥಿಗಳು ಯಾವತ್ತೂ ಗೌರವಿಸಬೇಕು ಅದುವೇ ಅವರ ಸಾಧನೆ ಮತ್ತು ಪ್ರತಿಫಲಕ್ಕೆ ಶ್ರೀರಕ್ಷೆ ಎಂದರು.

ಕಾಲೇಜಿನ ಉಪಪ್ರಾಂಶುಪಾರಾದ ಡಾ. ಹೆಚ್ ಆರ್ ಸುಜಾತ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೋ ನಾರಾಯಣ ಭಂಡಾರಿ ವಂದಿಸಿದರು. ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಶಶಿಕಲಾ ಎಂ ಪಿ ಶಿಕ್ಷಕ ರಕ್ಷಕ ಸಂಘದ ಕಾರ್ಯಕಾರಿ ಸಮಿತಿ ರಚಿಸಿದರು. ಕನ್ನಡ ವಿಭಾಗ ಮುಖ್ಯಸ್ಥರಾದ ಶ್ರೀ ಶಿವಣ್ಣ ಪ್ರಭು ಕೆ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಕಾವ್ಯ ದಿವ್ಯಶ್ರೀ ಮತ್ತು ಪೂಜಾ ಪ್ರಾರ್ಥಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...