Saturday, February 8, 2025

ಶ್ರೀ ವಂಕಟರಮಣ ಸ್ವಾಮಿ ಕಾಲೇಜಿನಲ್ಲಿ ‘ಪೋಸ್ಟ್ ಗ್ರಾಜ್ಯುವೇಟ್ ಡೇ’

ಬಂಟ್ವಾಳ: ವಿದ್ಯೆ ಎನ್ನುವುದು ಒಬ್ಬ ವಕ್ಯಿಯ ವ್ಯಕ್ತಿತ್ವಕ್ಕೆ ಭೂಷಣ. ಹೆಣ್ಣೊಬ್ಬಳ ತಲೆಯಲ್ಲಿರುವ ಹೂ ಹೇಗೆ ಆಕೆಗೆ ಅಲಂಕಾರ ಪ್ರಾಯವೊ ಹಾಗೆ ವಿದ್ಯಾರ್ಥಿಯಾದವರ ಪಾಲಿಗೆ ವಿದ್ಯೆಯು ಅಲಂಕಾರವಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಪ್ರೊ ಗಣಪತಿ ಭಟ್ ಕುಳಮರ್ವ ಹೇಳಿದರು.
ಅವರು ಇಂದು ಬಂಟ್ವಾಳದ ಶ್ರೀ ವಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಪೋಸ್ಟ್ ಗ್ರಾಜ್ಯುವೇಟ್ ಡೇ ಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ವಿದ್ಯೆ ಎನುವುದ್ನು ಜೀವನದಲ್ಲಿ ಎಲ್ಲಕ್ಕಿಂತ ಮುಖ್ಯವಾದು ಸಂಪತ್ತು ಮತ್ತು ಅದು ಹಂಚುವ ಸಂಪತ್ತು. ಅಂತಹ ಸಂಪತ್ತನ್ನು ಗಳಿಸಲು ಸಾಧನೆ ಬೇಕು. ಆದಕಾರಣ ವಿದ್ಯಾರ್ಜನೆ ಎನ್ನುವುದು ತಪ್ಪಸ್ಸು. ವಿದ್ಯಾರ್ಥಿಯಾದವ ಓರ್ವ ಸಾಧಕ ಎಂದವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಾಂಡುರಂಗ ನಾಯಕ್ ಸ್ನಾತಕೋತ್ತರ ಪದವಿ ಎನ್ನುವುದು ಭವಿಷ್ಯದ ಪ್ರಧಾನ ಘಟ್ಟ ಅಲ್ಲದೆ ಜವಾಬ್ದಾರಿಯುತವಾಗಿ ವ್ಯವಹರಿಸಬೇಕಾದ ಹಂತ. ಇಲ್ಲಿನ ಸಾಧನೆ ಭವಿಷ್ಯ ನಿರ್ಮಾಣದಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ ಎಂದರು.
ಸ್ನಾತಕೋತ್ತರ ವಿಭಾಗ ಮುಖ್ಯಸ್ಥರಾದ ನೆಲ್ಸನ್ ಮಾರ್ವಿನ್ ಫೆರ್ನಾಂಡೀಸ್ ವಿಭಾಗದ ವರದಿ ಮಂಡಿಸಿದರು ಉಪನ್ಯಾಸಕಿ ಸ್ವಾತಿ ಶೆಟ್ಟಿ ಅತಿಥಿ ಪರಿಚಯ ಮಾಡಿದರು. ಉಪನ್ಯಾಸಕಿ ಮಂಜುಳಾ ಡಿ ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿದರು. ವಾಣಿಜ್ಯ ಸ್ನಾತಕೋತ್ತರ ಸಂಘದ ಕಾರ್ಯದರ್ಶಿ ರಿದಿಶಾ ಶೆಟ್ಟಿ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಅರ್ಚನಾ ವಂದಿಸಿದರು ವಿದ್ಯಾರ್ಥಿನಿ ದೀಕ್ಷಿತಾ ಎಲ್ ಕಾರ್ಯಕ್ರಮ ನಿರೂಪಿಸಿದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...