Tuesday, July 15, 2025

ಬೇಸಗೆ ಶಿಬಿರದ ಸಮರೋಪ ಸಮಾರಂಭ

ಬಂಟ್ವಾಳ : ಗಿಡವೊಂದು ಹೇಗೆ ತನಗೆ ಸಿಕ್ಕಿದ ನೀರು, ಗೊಬ್ಬರಗಳನ್ನು ಹೀರಿ ಹೆಮ್ಮರವಾಗಿ ಬೆಳೆಯುತ್ತದೆಯೋ ಹಾಗೆಯೇ ವಿದ್ಯಾರ್ಥಿ ಜೀವನವಾಗಿದೆ. ಎಳೆಯ ವಯಸ್ಸಿನಲ್ಲಿಯೇ ಆತ ಪಡೆದ ಅನುಭವಗಳು ಆತನ ಪರಿಪಕ್ವತೆಗೆ ಕಾರಣವಾಗುತ್ತದೆ. ರಜೆಯ ಸಂದರ್ಭಗಳಲ್ಲಿ ನಡೆಯುವ ಶಿಬಿರಗಳಲ್ಲಿ ಪಾಲುಗೊಳ್ಳವುದರಿಂದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಹೇಳಿದರು

ಅವರು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಪೌಢ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಬೇಸಗೆ ಶಿಬಿರದ ಸಮರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತದ್ದರು. ಇಲ್ಲಿ ನೀವು ಪಡೆದ ಅನುಭವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವು ನಿಮ್ಮ ಮುಂದಿನ ವ್ಯಕ್ತಿತ್ವ ವಿಕಾಸಕ್ಕೆ ಪೂರಕ ಎಂದವರು ಹೇಳಿದರು

ಶಿಬಿರದ ಸಹ ಸಂಯೋಜಕ ಶಿವಣ್ಣ ಪ್ರಭು ಸ್ವಾಗತಿಸಿದರು. ಶಿಬಿರದ ಸಂಯೋಜಕಿ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥೆ ಸಕೀನಾ ನಾಝರ್ ವಂದಿಸಿದರು. ಕನ್ನಡ ಉಪನ್ಯಾಸಕ ಚೇತನ್ ಮುಂಡಾಜೆ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕಿ ರೂಪಾ ಕಾರ್ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಪ್ರೀಯಾ ಸಹಕರಿಸಿದರು.

More from the blog

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...