Sunday, July 6, 2025

ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

ಬಂಟ್ವಾಳ: ಮಾ24 ವಿದ್ಯಾರ್ಥಿಯಾದವನು ತನ್ನ ಕಲಿಕೆಯ ಸಮಯದಲ್ಲಿ ವಿಶೇಷ ಆಸಕ್ತಿಯೊಂದಿಗೆ ಅಹರ್ನಿಶಿ ಪ್ರಯತ್ನವನ್ನು ಮಾಡಬೇಕು ಆಧುನಿಕ ಆಕರ್ಷಣೆಯಿಂದ ತನ್ನ ಕರ್ತವ್ಯದ ಕಡೆ ಗಮನ ನೀಡಬೇಕು. ಓರ್ವ ವಿದ್ಯಾರ್ಥಿ ಉತ್ತಮ ಫಲಿತಾಂಶ ಪಡೆಯುವಲ್ಲಿ ಆತನ ದುಡಿಮೆಯೊಂದಿಗೆ ಪೋಷಕರ ಮತ್ತು ಶಿಕ್ಷಕರ ಜವಾಬ್ದಾರಿಯು ಅಷ್ಟೇ ಮುಖ್ಯವಾದುದು. ಎಂದು ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಹೇಳಿದರು
ಅವರು ಇಂದು ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸಂಸ್ಥೆಯೊಂದರಲ್ಲಿರುವ ನಿಯಾಮಾವಳಿಗಳು ಇರುವುದು ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಅದನ್ನು ಪಾಲಿಸಿ ಕಲಿತವರಿಗೆ ಯಶಸ್ಸು ನಿಶ್ಚಿತ. ಆದರೆ ಮೊಬೈಲ್ ನಂತಹ ಆಧುನಿಕ ಸಾಧನಗಳು ಇಂದು ಮಕ್ಕಳ ಮನೋಸ್ಥಿತಿ ಹಾಳು ಮಾಡುತ್ತಿರುವುದು ವಿಷಾದನೀಯ. ಹೋಸ ಜೀವನ ಶೈಲಿಯ ಕಡೆಗೆ ತಿರುಗಿದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ವಿದ್ಯಾರ್ಥಿ ಉತ್ತಮ ಫಲಿತಾಂಶ ಪಡೆದಾಗ ಆತನ ಸಂತೋಷದೊಂದಿಗೆ ಹೆತ್ತವರಿಗೆ ಮತ್ತು ಕಾಲೇಜಿಗೆ ಕೀರ್ತಿ ಬರುತ್ತದೆ ಎಂದವರು ಹೇಳಿದರು. ಕಾಲೇಜಿನಲ್ಲಿ ಇವರೆಗೆ ನಡೆದ ಕಾರ್ಯಕ್ರಮಗಳು ಮತ್ತು ವಿದ್ಯಾರ್ಥಿಗಳ ಸಾಧನೆಯನ್ನು ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯದ 2017-18ನೇ ಸಾಲಿನ ಬಿ.ಎಸ್ಸಿ ಪರೀಕ್ಷೆಯಲ್ಲಿ 4ನೇ ರ್‍ಯಾಂಕ್ ಗಳಿಸಿದ ಸುರಕ್ಷಾ ಮತ್ತು 9ನೇ ರ್‍ಯಾಂಕ್ ಗಳಿಸಿದ ನತಾಷಾ ಜಾಸ್ಮಿನ್ ಡಿಸೋಜ ಇವರನ್ನು ಮತ್ತು ಪಿ.ಎಚ್.ಡಿ ಪದವಿ ಪಡೆದ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿಯಾದ ಡಾ| ದಾಕ್ಷಯಿಣಿ ಹಾಗೂ ಕಾಲೇಜಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾಥಿಗಳು ಮತ್ತು ಸ್ಟೂಡೆಂಟ್ ಫೆಕಲ್ಟಿ ತರಗತಿ ನಡೆಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ರೊನಾಲ್ಡ್ ಡಿಸೋಜ ಮಹಾಸಭೆಯ ಅಧ್ಯಕ್ಷತೆ ವಹಿಸಿ ವರದಿ ವರ್ಷದಲ್ಲಿ ತನಗೆ ಕೊಟ್ಟ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಸಂಘದ ನೂತನ ಕಾರ್ಯಕಾರಿ ಸಮಿತಿಯನ್ನು ಈ ಸಂದರ್ಭದಲ್ಲಿ ರಚಿಸಲಾಯಿತು. ಅಧ್ಯಕ್ಷರಾಗಿ ರೊನಾಲ್ಡ್ ಡಿಸೋಜ ಪುನರಾಯ್ಕೆಯಾದರು. ಉಪಪ್ರಾಂಶುಪಾಲೆ ಡಾ| ಎಚ್ ಆರ್ ಸುಜಾತ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮ ಪಾಲಕ ಪ್ರೊ ನಾರಾಯಣ ಭಂಡಾರಿ ವಂದಿಸಿದರು. ಪ್ರೊ ನಾರಾಯಣ ಭಂಡಾರಿ ನೂತನ ಕಾರ್ಯಕಾರಿ ಸಮಿತಿಯ ರಚನೆಯನ್ನು ನಿರ್ವಹಿಸಿದರು.  ಶಾಂತಿ ರೋಚಿ  ಸಕೀನಾ ನಾಝಿರ್ ಪುರಸ್ಕಾರಗೊಂಡ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಕಿಟ್ಟು ರಾಮಕುಂಜ ಕಾರ್ಯಕ್ರಮ ನಿರೂಪಿಸಿದರು.

More from the blog

ಏಮಾಜೆ ಶಾಲೆ : ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ..

ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ...

ಬೆಂಜನಪದವು ಪ್ರೌಢಶಾಲೆ : ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ..

ಬಂಟ್ವಾಳ: ಇಂದು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ನಡೆಯಿತು. ಶಾಲಾ ಸಂಸತ್ತಿನ ಮುಖ್ಯ ಮಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಮಂತ್ರಿಗಳಿಗೆ ರಾಜ್ಯಪಾಲರು ಪ್ರಮಾಣ...

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...

ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮ..

ಮಂಗಳೂರು: ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ...