ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಎ ಒಕ್ಕೂಟ ಹಾಗೂ ಉಕ್ಕುಡ ಒಕ್ಕೂಟದ ಆಶ್ರಯದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರವನ್ನು ಸ್ವಚ್ಛ ಮಾಡಲಾಯಿತು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ವಿಟ್ಲ ಎ ಒಕ್ಕೂಟದ ವಲಯ ಮೇಲ್ವಿಚಾರಕ ರಮೇಶ, ಅಧ್ಯಕ್ಷ ಜನಾರ್ದನ ಪದ್ಮಶಾಲಿ, ಸೇವಾ ಪ್ರತಿನಿಧಿಗಳಾದ ವಿನಯ ರೈ ಮತ್ತು ಹೇಮಲತಾ, ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.

