Thursday, February 13, 2025

ವಿಟ್ಲ: ಸ್ವಚ್ಚತಾ ಅಭಿಯಾನ

ವಿಟ್ಲ: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬಂಟ್ಟಾಳ ತಾಲೂಕು ಹಾಗೂ ರೋಟರಿ ಕ್ಲಬ್ ವಿಟ್ಲ ಮತ್ತು ಎನ್.ಎಸ್.ಎಸ್ ಘಟಕ ವಿಠಲ ಪದವಿಪೂರ್ವ ಕಾಲೇಜು ವಿಟ್ಲ ಇದರ ಜಂಟಿ ಆಶ್ರಯದಲ್ಲಿ ವಿಟ್ಲ ಪೇಟೆಯ ಇಕ್ಕೆಲಗಳಲ್ಲಿರುವ ಪ್ಯಾಸ್ಟಿಕ್ ತ್ಯಾಜ್ಯ ನಿರ್ಮೂಲನ ಮಾಡುವ ಶ್ರಮದಾನ ನಡೆಯಿತು.
ವಿಟ್ಲ ರೋಟರಿ ಕ್ಲಬ್ ವಿಟ್ಲ ಇದರ ಅಧ್ಯಕ್ಷ ಜಯರಾಮ್ ರೈ ಉದ್ಘಾಟಿಸಿ ಮಾತನಾಡಿ ಸ್ವಚ್ಚತೆಯೆನ್ನುವುದು ಕೇವಲ ಸಾಂಕೇತಿಕವಾಗಿರದೇ ಪ್ರತಿಯೊಬ್ಬರು ಪ್ರತಿನಿತ್ಯವು ತಮ್ಮ ಬದುಕಿನ ಎಲ್ಲಾ ಹಂತಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅತೀ ಅಗತ್ಯ ಎಂದರು.
ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ದಮಯಂತಿ ವಹಿಸಿದ್ದರು. ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಸಂಜೀವ ಪೂಜಾರಿ, ಅಣ್ಣಪ್ಪ ಸಾಸ್ತನ, ಸಂಮ್ರಿತಾ, ಕುಮಾರಿ ದಯಾ ಉಪಸ್ಥಿತರಿದ್ದರು.
ಕೈರುನೀಸಾ ಸ್ವಾಗತಿಸಿದರು. ಮಮತಾ ವಂದಿಸಿದರು. ಗ್ರಾಮ ವಿಕಾಸ ಅಧ್ಯಕ್ಷೆ ಚೈತ್ರಾ ನಿರೂಪಿಸಿದರು.

 

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...