Wednesday, June 25, 2025

ಒಡಿಯೂರು ಶ್ರೀಗಳ ಜನ್ಮದಿನೋತ್ಸವ: ಕೊಳ್ನಾಡು ಗ್ರಾಮದಲ್ಲಿ ಸ್ವಚ್ಚತೆ

ವಿಟ್ಲ: ಗ್ರಾಮಸ್ವಚ್ಛತೆಯ ಮೂಲಕ ರಾಷ್ಟ್ರದ ಸ್ವಚ್ಛತೆ ಸಾಧ್ಯ ಇದರಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಕುಳಾಲು ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಪರಮೇಶ್ವರ ಆಚಾರ್‍ಯ ಹೇಳಿದರು.
ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಮಂಕುಡೆ ಘಟ ಸಮಿತಿ ಮತ್ತು ಕೊಳ್ನಾಡು ಗ್ರಾಮಸಮಿತಿ ವತಿಯಿಂದ ಆಯೋಜಿಸಲಾದ ಕೊಳ್ನಾಡು ಗ್ರಾಮ ಸ್ವಚ್ಛತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ವೇದಿಕೆಯಲ್ಲಿ ಮಂಕುಡೆ ಕುಡ್ತಮುಗೇರು ಹಳೇ ವಿದ್ಯಾರ್ಥಿ ಯುವಕ ಮಂಡಲದ ಸಂಚಾಲಕ ರಮೇಶ್, ಘಟ ಸಮಿತಿ ಅಧ್ಯಕ್ಷರಾದ ರಾಮಣ್ಣ ಮೇಸ್ತ್ರಿ, ಗ್ರಾಮ ಸಮಿತಿ ಅಧ್ಯಕ್ಷರಾದ ಶ್ರೀಧರ್ ಪೂಂಜ, ಪ್ರಗತಿಪರ ಕೃಷಿಕರಾದ ರಾಜಾರಾಮ ಹೆಗ್ಡೆ, ಬಿಜೆಪಿ ಯುವ ಮೊರ್ಚಾದ ಕಾರ್‍ಯದರ್ಶಿಗಳಾದ ಜಯರಾಮ ನಾಯ್ಕ ಕುಂಟ್ರಕಳ, ಗ್ರಾಮ ಪಂಚಾಯಿತಿ ಸದಸ್ಯರಾದ ವೇದಾವತಿ ರೋಹಿನಾಥ್ ಪೂಜಾರಿ, ಸಂಘಟನಾ ಕಾರ್‍ಯದರ್ಶಿ ಮನೀಷ್, ಉಪಾಧ್ಯಕ್ಷರಾದ ಪ್ರೀತ ಪಡಾರು ಉಪಸ್ಥಿತರಿದ್ದರು.
ಮಂಕುಡೆ ಹಳೇ ವಿದ್ಯಾರ್ಥಿ ಯುವಕ ಮಂಡಲ ಅಧ್ಯಕ್ಷ ವೇಣುಗೋಪಾಲ ಆಚಾರ್‍ಯ ಸ್ವಾಗತಿಸಿದರು. ಗ್ರಾಮಸಮಿತಿ ಪ್ರಧಾನ ಕಾರ್‍ಯದರ್ಶಿ ಪರಮೇಶ್ವರ ಆಚಾರ್‍ಯ ವಂದಿಸಿದರು. ಘಟ ಸಮಿತಿಯ ಕಾರ್‍ಯದರ್ಶಿ ರೋಹಿನಾಥ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸೇವಾದೀಕ್ಷಿತರಾದ ವಾರಿಜ, ರಾಧಾಕೃಷ್ಣ, ಸಂಘದ ಸದಸ್ಯರು, ಘಟ ಸಮಿತಿ ಪದಾಧಿಕಾರಿಗಳು ಸಹಕರಿಸಿದರು.

ಒಡಿಯೂರು ಶ್ರೀಗಳ ಜನ್ಮದಿನೋತ್ಸವ: ಪಿಲಾತಬೆಟ್ಟು ಗ್ರಾಮದಲ್ಲಿ ಸ್ವಚ್ಚತೆ

ವಿಟ್ಲ: ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಪಿಲಾತಬೆಟ್ಟು ಘಟ ಸಮಿತಿ ವತಿಯಿಂದ ಮುರುಘೇಂದ್ರ ಸಭಾಭವನದ ಮೈದಾನದಲ್ಲಿ ಸ್ವಚ್ಛತಾ ಕಾರ್‍ಯಕ್ರಮ ನಡೆಸಲಾಯಿತು. ಪಿಲಾತಬೆಟ್ಟು ಗ್ರಾಮಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕುಮ್ಮಂಗಿಲ, ಮುರುಘೇಂದ್ರ ಮಿತ್ರ ಮಂಡಳಿಯ ಅಧ್ಯಕ್ಷರಾದ ಉದಯ ಕುಮಾರ್, ವನಿತ ಸಮಾಜದ ಅಧ್ಯಕ್ಷೆ ಆಶಾ, ಘಟ ಸಮಿತಿ ಅಧ್ಯಕ್ಷರಾದ ಮೋಹನ್ ಸಾಲ್ಯಾನ್, ಪದಾಧಿಕಾರಿಗಳು ಹಾಗೂ ವಿಕಾಸವಾಹಿಸಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಪಿಲಾತಬೆಟ್ಟು ಗ್ರಾಮದ ಸೇವಾದೀಕ್ಷಿತೆ ಪುಷ್ಪಾವತಿ ಕಾರ್‍ಯಕ್ರಮ ನಿರೂಪಿಸಿದರು.

More from the blog

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...