Wednesday, January 28, 2026

ಮಹಾಮಸ್ತಕಾಭಿಷೇಕಕ್ಕೆ ತೆರಳುವ ಭಕ್ತಾಧಿಗಳಿಗೆ ಬಿ.ಸಿ.ರೋಡಿನಲ್ಲಿ ಸ್ವಾಗತದ್ವಾರ

ಬಂಟ್ವಾಳ: ಫೆ.9 ರಿಂದ 18 ರವರೆಗೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ನಡೆಯುವ ಮಹಾಮಸ್ತಕಾಭಿಷೇಕದ ಅಂಗವಾಗಿ ಬಿಸಿರೋಡಿನಿಂದ ಧರ್ಮಸ್ಥಳ ತೆರಳುವ ಭಕ್ತಾಧಿಗಳಿಗೆ ಸ್ವಾಗತಕೋರುವ ಸ್ವಾಗತದ್ವಾರವನ್ನು ಬಿ.ಸಿ.ರೋಡಿನ ಬ್ರಹ್ಮ ಶ್ರೀ ವ್ರತ್ತ ದ ಬಳಿ ಬಂಟ್ವಾಳ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ನಿರ್ಮಿಸಲಾಗಿದೆ.
ಈ ಸ್ವಾಗತ ದ್ವಾರವನ್ನು ಗುರುವಾರ ಬೆಳಿಗ್ಗೆ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಚಂದ್ರಶೇಖರ್ ನೆಲ್ಯಾಡಿ ಉದ್ಘಾಟಿಸಿದರು.
ಈ‌ಸಂದರ್ಭದಲ್ಲಿ ಬಿಸಿರೋಡಿನ ಜನಜಾಗ್ರತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿ.ಸೋಜ, ಕೇಂದ್ರ ಒಕ್ಕೂಟದ ಅಧ್ಯಕ್ಷ ಮಾದವ ವಳವೂರು, ಕೇಂದ್ರ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಸದಾನಂದ ನಾವೂರ, ಕೃಷ್ಟಪ್ಪ ಪೂಜಾರಿ, ಬಂಟ್ವಾಳ ವಲಯ ಅಧ್ಯಕ್ಷ ವಸಂತ ಮೂಲ್ಯ, ಬಿಸಿರೋಡ ವಲಯ ಅಧ್ಯಕ್ಷ ಶೇಖರ್ ಕಾಮಾಜೆ, ಯೋಜನಾಧಿಕಾರಿ ಜಯಾನಂದ ಪಿ.ಪ್ರಮುಖರಾದ ಪದ್ಮನಾಭ ಪರಂಗಿಪೇಟೆ, ಗಂಗಾದರ, ಪಶುಪತಿ, ಸತ್ಯಪ್ರಸಾದ್, ಯತೀಶ್ ವಿಟ್ಲ, ದಾಮೋದರ ನಲ್ಕೆಮಾರ್, ವಾಮನ ಪೂಪಾಡಿಕಟ್ಟೆ, ವಾಮನ ಪಕ್ಜೆರೊಟ್ಟು, ನಿತಿನ್ ನಲ್ಕೆಮಾರ್, ಗೋಪಾಲ, ಕೃಷ್ಣ ಶಾಂತಿ, ಧನುಷ್, ತಿಮ್ಮಪ್ಪ, ನಾರಾಯಣ, ನಾರಾಯಣ ಮೆಲ್ಕಾರ್, ಜನಾರ್ಧನ, ತಿಲಕ್ , ಹಾಗೂ ಮೇಲ್ವಿಚಾರಕರಾದ, ಶಶಿದರ್  , ರಮೇಶ್, ಹಾಗೂ ಚಂದ್ರಶೇಖರ್ ಉಪಸ್ಥಿತರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...