Friday, June 27, 2025

ಬಾಳೆಕೋಡಿ ಶಶಿಕಾಂತ ಸ್ವಾಮೀಜಿ ಅನಾರೋಗ್ಯದಿಂದ ನಿಧನ

ವಿಟ್ಲ: ಬಾಳೆಕೋಡಿ ಶಿಲಾಂಜನ ಕ್ಷೇತ್ರ ಮೌನಕ್ಕೆ ಜಾರಿದೆ. ಡಾ! ಶ್ರೀ ಶಶಿಕಾಂತ ಮಣಿ ಸ್ವಾಮೀಜಿಯವರು ಜೀವನದ ಯಾತ್ರೆಗೆ ಸೋಮವಾರ ತಡ ರಾತ್ರಿ ಅಂತಿಮ ಚುಕ್ಕಿ ಇಟ್ಟಿದ್ದಾರೆ.

ವಿಟ್ಲದ ಕನ್ಯಾನದ ಗ್ರಾಮದ ಬಾಳೆಕೋಡಿ ಶಿಲಾಂಜನಾ ಕ್ಷೇತ್ರದ ಶ್ರೀ ಡಾ. ಶಶಿಕಾಂತ ಸ್ವಾಮೀಜಿ ಅನಾರೋಗ್ಯದಿಂದ ನಿಧನರಾದರು.
45 ವರ್ಷದ ಬಾಳೆಕೋಡಿ ಸ್ವಾಮೀಜಿ, ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಭಕ್ತರಿಗೆ ಆಶೀರ್ವಚನ ನೀಡುತ್ತಿದ್ದರು. ಪ್ರತಿನಿತ್ಯ ಇಲ್ಲಿಗೆ ಕರ್ನಾಟಕ ಹಾಗೂ ಕೇರಳ ರಾಜ್ಯದಿಂದ ಹಲವು ಭಕ್ತರು ತಮ್ಮ ಕಷ್ಟಗಳ ನಿವಾರಣೆಗಾಗಿ ಬರುತ್ತಿದ್ದರು. ಅವರು ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲವು ಸಮಯ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಕ್ಷೇತ್ರದ ಸಮೀಪದಲ್ಲಿರುವ ಮನೆಯಲ್ಲಿದ್ದರು. ಅವರಿಗೆ ಡಾಕ್ಟರೇಟ್ ಬಿರುದು ಕೂಡ ಲಭಿಸಿತ್ತು. ತೀರಾ ಅನಾರೋಗ್ಯದಿಂದ ಕ್ಷೇತ್ರದಲ್ಲಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
ಸಣ್ಣ ಪ್ರಾಯದಲ್ಲಿ ಸ್ವಾಮೀಜಿ ನಿಧನರಾಗಿರುವುದು ಕ್ಷೇತ್ರದ ಭಕ್ತರಿಗೆ ನೋವು ತಂದಿದೆ.
ಕ್ಷೇತ್ರದ ಬಗ್ಗೆ ಸಾಕಷ್ಟು ಕನಸು ಹೊಂದಿದ್ದ ಸ್ವಾಮೀಜಿ ಹಲವಾರು ಅಭಿವೃದ್ಧಿ ಕಾರ್ಯಗಳ ಮೂಲಕ ಗ್ರಾಮದ ಅಭಿವೃದ್ಧಿ ಗೂ ಸಹಕಾರಿಯಾಗಿದ್ದರು.
ಇಂತಹ ಓರ್ವ ಸ್ವಾಮೀಜಿ ಯ ನಿಧನದ ವಾರ್ತೆ ಸಮಾಜಕ್ಕೆ ತುಂಬಲಾರದ ನಷ್ಟ ವಾಗಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...