Monday, February 10, 2025

ಇಂದಿನಿಂದ ಮಾ30 ರ ವರೆಗೆ ಬಂಟ್ವಾಳದ ಪಂಚಾಯತ್ ಗಳಲ್ಲಿ ಸ್ವೀಪ್ ಕಾರ್ಯಕ್ರಮ

ಬಂಟ್ವಾಳ: ಮಾ.18 ರಿಂದ ಮಾ30 ರ ವರೆಗೆ ತಾಲೂಕಿನ ಗ್ರಾಮ ಪಂಚಾಯತ್ ಗಳಲ್ಲಿ ಸ್ವೀಪ್ ಕಾರ್ಯಕ್ರಮ ನಡೆಯಲಿದೆ .
ಬಂಟ್ವಾಳ ಸಹಾಯ ಕ ಚುನಾವಣಾಧಿಕಾರಿ ಮಹೇಶ್ ಅವರ ಸೂಚನೆಯಂತೆ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರ ನೇತ್ರತ್ವದಲ್ಲಿ ಇಂದಿನಿಂದ ಮಾ30 ಪ್ರತಿ ಗ್ರಾಮ ಪಂಚಾಯತ್ ಗಳಲ್ಲಿ 2019 ರ ಲೋಕಸಭಾ ಚುನಾವಣಾ ನಿಮಿತ್ತ ತಾಲೂಕಿನ ಮತದಾರರಿಗೆ ಮಾಹಿತಿ ಹಾಗೂ ಮತದಾರರಿಗೆ ಜಾಗ್ರತಿ ಮೂಡಿಸುವ ಸಲುವಾಗಿ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವೈಯಕ್ತಿಕ ವಾಗಿ ಮುತುವರ್ಜಿ ವಹಿಸಿ ಗ್ರಾಮ ಕರಣಿಕ ರು , ಕಂದಾಯ ನಿರೀಕ್ಷಕ ರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು, ಎಂಆರ್. ಎಲ್.ಎಂ. ಎಂ.ಸಿ.ಆರ್.ಪಿಯವರು, ಸ್ವಸಹಾಯ ಸಂಘಗಳ ಒಕ್ಕೂಟದ ಆಧ್ಯಕ್ಷರುಗಳು ಹಾಗೂ ಸದಸ್ಯರು ಗಳನ್ನು ಒಗ್ಗೂಡಿಸಿ ಎಲ್ಲಾ ಮತದಾರರಿಗೆ ಈ ಕುರಿತು ಮಾಹಿತಿ ನೀಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನಿಗದಿತ ದಿನದಂದು ಕಾರ್ಯಕ್ರಮ ಸಂಯೋಜನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

More from the blog

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳಿಂದ 2 ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಮೇರೆಗೆ ಫೆ. 10 ರಿಂದ ಬೆಳ್ತಂಗಡಿಯಲ್ಲಿ...

ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಡೆಯಿತು ಪೂರ್ವಭಾವಿ ಸಭೆ

ಬಂಟ್ವಾಳ:  ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ಇಲ್ಲಿ ನಡೆಯುವ ಶತಚಂಡಿಕಯಾಗದ ಹಾಗೂ ಕುಪ್ಪೆಟ್ಟು ಬರ್ಕೆ ಕರ್ಪೆ ಪ್ರತಿಷ್ಠಾ ಮಹೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ಕಡೆಗುಂಡ್ಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್...

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...