Thursday, June 26, 2025

ಲಾಕ್ ಡೌನ್ ಸಮಯದಲ್ಲಿ ಬಂಟ್ವಾಳ ಪೊಲೀಸರಿಗೆ ಸಂಜೆಯ ಚಾ ತಿಂಡಿಯ ವ್ಯವಸ್ಥೆ ಮಾಡಿದ ತಂಡ

ಬಂಟ್ವಾಳ: ಲಾಕ್ ಡೌನ್ ಸಮಯದಲ್ಲಿ ಕರ್ತವ್ಯದಲ್ಲಿ ಇರುವ ಬಂಟ್ವಾಳ ಪೊಲೀಸರಿಗೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ ) ಇದರ ಅಧ್ಯಕ್ಷ ಅರ್ಜುನ್ ಬಂಡಾರ್ಕರ ಮತ್ತು ವಿ.ಎನ್.ಆರ್‌.ಗೋಲ್ಡ್ ಮಾಲೀಕ ನಾಗೇಂದ್ರ ಬಾಳಿಗ ಹಾಗೂ ಗಿರೀಶ್ ಪೈರವರು ಅವರು ಸಂಜೆ ಚಾ ಮತ್ತು ತಿಂಡಿ ವ್ಯವಸ್ಥೆ ಕಲ್ಪಿಸಿದ್ದಾರೆ.

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಂಜೆ ಹೊತ್ತು ಯಾವುದೇ ಹೋಟೆಲ್ ಓಪನ್ ಇಲ್ಲದ ಕಾರಣ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳಿಗೆ ಸಂಜೆ ಚಾ ತಿಂಡಿಗೆ ತುಂಬಾ ಕಷ್ಟವಾಗುತಿತ್ತು.

ಈ ಸಮಸ್ಯೆಯನ್ನು ಅರಿತ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ ) ಇದರ ಅಧ್ಯಕ್ಷರಾದ ಅರ್ಜುನ್ ಬಂಡಾರ್ಕರ ಮತ್ತು ವಿ.ಎನ್.ಆರ್‌.ಗೋಲ್ಡ್ ಮಾಲೀಕ ನಾಗೇಂದ್ರ ಬಾಳಿಗ ಹಾಗೂ ಗಿರೀಶ್ ಪೈರವರು ಅವರು ಕೂಡಲೇ ಸ್ಪಂದಿಸಿ‌ ಕಳೆದ 6 ದಿನದಿಂದ ಪ್ರತಿದಿನ ಸಾಯಂಕಾಲ ಬಂಟ್ವಾಳ ವೃತ್ತ ವ್ಯಾಪ್ತಿಯ ವಿವಿಧ ಸ್ಥಳ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಠಾಣೆಯ ಸುಮಾರು 100 ಪೊಲೀಸ್ ಸಿಬ್ಬಂದಿಗಳಿಗೆ ಸಂಜೆ ಚಾ ಹಾಗೂ ತಿಂಡಿಯ ವ್ಯವಸ್ಥೆ ಮಾಡಿರುತ್ತಾರೆ.

ಅಲ್ಲದೆ ಈ ವ್ಯವಸ್ಥೆ ಲಾಕ್ಡೌನ್ ಮುಗಿಯುವ ವರೆಗೂ ಮುಂದುವರಿಸುವುದಾಗಿ ತಿಳಿಸಿರುತ್ತಾರೆ. ಇವರಿಗೆ ಬಂಟ್ವಾಳ ವೃತ್ತದ ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು ಧನ್ಯವಾದ ತಿಳಿಸಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...