Tuesday, February 3, 2026

ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಕರೆ

ಬಂಟ್ವಾಳ: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ಫ್ಯೂ ನಿಯಮಗಳ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ನಿಯಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.

ಕೊರೊನಾ ನಿಯಂತ್ರಣದ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದ ಅವರು, ಜನರಿಗೆ ಭಯಹುಟ್ಟಿಸುವ ರೀತಿಯ ಅಪಪ್ರಚಾರಗಳಿಗೆ ಕಡಿವಾಣ ಹಾಕಬೇಕು. ಸುಳ್ಳು ಪ್ರಚಾರ ಕುರಿತು ಕಟ್ಟುನಿಟ್ಟಿ‌ನ ನಿಗಾ ವಹಿಸಿ. ಈ ಸಂದರ್ಭ ಯಾವುದೇ ಸಮಸ್ಯೆಗಳಿದ್ದರೆ ಅದನ್ನು ಬಗೆಹರಿಸುವ ಕಾರ್ಯ ಮಾಡಬೇಕು‌. ಈ ಕುರಿತು ವಿಶೇಷ ತಂಡ ರಚನೆ ಮಾಡಿ
ಎಂದರು.

ಸರಿಯಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳಿ ಎಂದು ತಹಶೀಲ್ದಾರ್ ಮತ್ತು ಪೊಲೀಸರಿಗೆ ಸೂಚಿಸಿದ ಶಾಸಕರು, ವಿನಾಕಾರಣ ಹೊರಗೆ ತಿರುಗುವವರ ಮೇಲೆ ಕೇಸ್ ದಾಖಲಿಸಿ. ಬೀಟ್ ಪೊಲೀಸರು ನಿಗಾ ವಹಿಸಬೇಕು. ಹೈವೇ ಪ್ಯಾಟ್ರೋಲ್ ವಾಹನಗಳ ಗಸ್ತು ಹೆಚ್ಚಿಸಿ ಎಂದು ಅವರು ಪೋಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಕೊರೊನಾ ವಿರುದ್ದದ ಹೋರಾಟದಲ್ಲಿ ಯಾರು ವಿರೋಧ ಮಾಡಿದರೂ ಅಡ್ಡ ಬಂದರೂ ಅಂತಹವರ ಮೇಲೆ ಮುಲಾಜಿಲ್ಲದೆ ಕ್ರಮಕೈಗೊಳ್ಳಿ. ಅಧಿಕಾರಿಗಳು ಮತ್ತು ಟಾಸ್ಕ್ ಫೋರ್ಸ್ ಸಮಿತಿ ಜೊತೆಯಾಗಿ ಕೆಲಸ ಮಾಡಿದರೆ ಗ್ರಾಮ ಮಟ್ಟದಲ್ಲಿ ಕೊರೊನಾ ನಿಯಂತ್ರಣ ಸಾಧಿಸಲು ಸಾಧ್ಯವಾಗಬಹುದು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಕೊರೊನಾ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳಿ. ಪೋಲೀಸರು ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ. ಯಾರಿಗೂ ತಲೆಕೆಡಿಸಿಕೊಳ್ಳಬೇಡಿ. ಕೊರೊನಾ ನಿಯಂತ್ರಣಕ್ಕಾಗಿ ಒಗ್ಗಟ್ಟಿನ ಮೂಲಕ ಹೋರಾಟ ಮಾಡೋಣ. ಜನರ ಸೇವೆ ಮಾಡಲು ಸಿಕ್ಕಿದ ಅವಕಾಶ ಎಂದು ತಿಳಿದು ಸಂಘಟನಾತ್ಮಕವಾಗಿ ಕೆಲಸ ಮಾಡಿ ಎಂದರು.

ಪರ್ಲಿಯಾ, ಫಾದರ್ ಮುಲ್ಲರ್ ಮತ್ತು ಸೋಮಯಾಜಿ ಆಸ್ಪತ್ರೆಗಳಲ್ಲಿ ನೋಡಲ್ ಅಧಿಕಾರಿಗಳು ನಿಗಾ ವಹಿಸುತ್ತಿದ್ದಾರೆ ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.

ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ಜೊತೆಯಲ್ಲಿ ವಾಮದಪದವು ಆಸ್ಪತ್ರೆಯಲ್ಲಿಯೂ ಕೋವಿಡ್ ರೋಗಿಗಳಿಗೆ ಬೇಕಾದ ವ್ಯವಸ್ಥೆ ಮಾಡಲಾಗಿದೆ. ವಗ್ಗ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ ಮಾಡಲಾಗಿ ಸಂಪೂರ್ಣ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಕಲ್ಲಡ್ಕದಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಲಾಗುತ್ತದೆ ಜನ ಭಯಬೀತರಾಗುವುದು ಬೇಡ ಎಂದು ಶಾಸಕರು ತಿಳಿಸಿದರು.

ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಕೊರೊನಾ ಸೋಂಕಿತರಿಗೆ 24 ಬೆಡ್ ಇದ್ದು ಅದರಲ್ಲಿ ಇನ್ನು 2 ಬೆಡ್ ವ್ಯವಸ್ಥೆ ಖಾಲಿ ಇದೆ. 1,345 ಮಂದಿ ಸೊಂಕಿತರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಕಡೆ ಕೋವಿಡ್ ಕೇರ್ ಸೆಂಟರ್ ಇದೆ. ವಗ್ಗದಲ್ಲಿ ತೆರೆಯುವ ಅವಕಾಶ ಇದೆ. ವಗ್ಗದಲ್ಲಿ ಭರ್ತಿಯಾದರೆ ವಾಮದಪದವುನಲ್ಲಿ ವ್ಯವಸ್ಥೆ ಮಾಡಲು ಅವಕಾಶ ಇದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ದೀಪಾ ಪ್ರಭು ಹೇಳಿದರು.

ವೇದಿಕೆಯಲ್ಲಿ ಬಂಟ್ವಾಳ ಡಿ‌.ವೈ.ಎಸ್.ಪಿ. ವೆಲೆಂಟೈನ್ ಡಿಸೋಜ, ತಹಶೀಲ್ದಾರ್ ರಶ್ಮಿ ಎಸ್.ಆರ್., ತಾಲೂಕು ಆರೋಗ್ಯ ಅಧಿಕಾರಿ ಡಾ‌. ದೀಪಾಪ್ರಭು ಮತ್ತು ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...