Monday, January 26, 2026

ವಿಟ್ಲ: ಮಹಿಳಾ ಸಬಲೀಕರಣ ತರಬೇತಿ

ವಿಟ್ಲ: ವಿಟ್ಲ ಘಟಕ ವತಿಯಿಂದ ಮೇಗಿನಪೇಟೆ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀಶಕ್ತಿ ಮಹಿಳಾ ಮಂಡಳಿ ಸದಸ್ಯರಿಗೆ ’ಮಹಿಳಾ ಸಬಲೀಕರಣ’ ತರಬೇತಿ ಕಾರ್‍ಯಕ್ರಮವು ನಡೆಯಿತು.
ಸಭಾಧ್ಯಕ್ಷತೆಯನ್ನು ಅಧ್ಯಕ್ಷೆ ಮಲ್ಲಿಕಾ ವಹಿಸಿದ್ದರು. ಅಧ್ಯಕ್ಷ ಬಾಲಕೃಷ್ಣ ವಿಟ್ಲ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ವಲಯ ತರಬೇತುದಾರರಾದ ರಮೇಶ್ ಭಾಗವಹಿಸಿದ್ದರು.
ಮೇಗಿನಪೇಟೆ ಅಂಗನವಾಡಿ ಶಿಕ್ಷಕಿ ಸರಸ್ವತಿ, ಸ್ತ್ರೀಶಕ್ತಿ ಅಧ್ಯಕ್ಷೆ ಅನಿತಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ನಾಗವೇಣಿ ಮತ್ತು ಸದಸ್ಯರು ಭಾಗವಹಿಸಿದ್ದರು. ಪೂರ್ವಾಧ್ಯಕ್ಷರಾದ ಭಾಸ್ಕರ್ ಶೆಟ್ಟಿ, ಲೂಯಿಸ್, ರೋಟರಿ ಕ್ಲಬ್ ನ ಪಿಟಿಶಾ ಉಪಸ್ಥಿತರಿದ್ದರು. ಸದಸ್ಯರಾದ ಶಿವಾನಿ. ಶೆಟ್ಟಿ, ಮಮತಾ ಸಂಜೀವ, ಶಾಂತಿ ಪಾಯಸ್ ನಾನಾ ಜವಾಬ್ದಾರಿಗಳನ್ನು ನೆರವೇರಿಸಿದರು.

More from the blog

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...