Wednesday, February 12, 2025

‘ಕಾರ್ಮಿಕರ ಸಮಸ್ಯೆ ನಿವಾರಣೆಗೆ ಅಡಕೆ ಕೌಶಲ್ಯ ಪಡೆ ತರಬೇತಿ ಪೂರಕ’-ಸತೀಶ್ಚಂದ್ರ

ವಿಟ್ಲ: ಅಡಕೆ ಮರ ಏರುವ ಕಾಯಕದಲ್ಲಿ ತೊಡಗಲು ಅಪೇಕ್ಷೆ ಪಟ್ಟು 30 ಮಹಿಳೆಯರು ಅಪೇಕ್ಷೆ ಪಟ್ಟರೆ ಅವರಿಗಾಗಿಯೇ ಪ್ರತ್ಯೇಕ ಅಡಕೆ ಕೌಶಲ್ಯ ಪಡೆ ತರಬೇತಿಯನ್ನು ಆಯೋಜಿಸಲು ಕ್ಯಾಂಪ್ಕೋ ಸಂಸ್ಥೆ ಸಿದ್ದವಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.
ಅವರು ಕ್ಯಾಂಪ್ಕೋ, ಐಸಿಎಆರ್ – ಸಿಪಿಸಿಆರ್ಐ, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ತೋಟಗಾರಿಕೆ ಇಲಾಖೆ, ಅಖಿಲ ಭಾರತ ಅಡಕೆ ಬೆಳೆಗಾರರ ಸಂಘ, ಅಡಕೆ ಪತ್ರಿಕೆ, ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಆಶ್ರಯದಲ್ಲಿ ವಿಟ್ಲದ ಸಿಪಿಸಿಆರ್ ಐ ಆವರಣದಲ್ಲಿ ಶುಕ್ರವಾರ ಸಮಾಪನಗೊಂಡ ಅಡಕೆ ಕೌಶಲ್ಯ ಪಡೆ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಡಕೆ ಕೌಶಲ್ಯ ಪಡೆ ತರಬೇತಿಯ ಮೂಲಕ   ಕಾರ್ಮಿಕರ ಕೊರತೆ ಎಂಬ ಸಾಮಾಜಿಕ ಸಮಸ್ಯೆಗೆ ಸ್ಪಂದಿಸಿದ ತೃಪ್ತಿ ಕ್ಯಾಂಪ್ಕೋಗೆ ಇದೆ ಎಂದ ಅವರು, ಈ ತರಬೇತಿಯಲ್ಲಿ ಕೌಶಲ್ಯ ಅಭಿವೃದ್ಧಿಯ ಜೊತೆಗೆ ನೈತಿಕ ಮೌಲ್ಯವನ್ನು ಎತ್ತಿಹಿಡಿಯುವ ಕೆಲಸವೂ ನಡೆದಿದೆ. ಕಳೆದ ಬಾರಿ ತರಬೇತಿ ನೀಡಿದ 30 ಮಂದಿಯಲ್ಲಿ ಈಗಾಗಲೇ 23 ಮಂದಿ ಅಡಿಕೆ ಕೊಯಿಲು ಮಾಡುತ್ತಿರುವುದೇ ಶಿಬಿರದ ಯಶಸ್ಸಿಗೆ ಸಾಕ್ಷಿಯಾಗಿದೆ. 5 ದಿನದ ತರಬೇತಿಯ ಅವಧಿಯಲ್ಲಿ ಶಿಬಿರಾರ್ಥಿ ಪಡೆದ ಅನುಭವ ಇಡೀ ಕೃಷಿ ವಲಯಕ್ಕೆ ದೊಡ್ಡ ಕೊಡುಗೆಯಾಗಿದ್ದು ಕೃಷಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಶಿಬಿರಾರ್ಥಿಗಳಿಗೆ ಗುರುತಿನ ಚೀಟಿ ವಿತರಣೆ ಮಾಡಿದ ಸಿಪಿಸಿಆರ್ಐ ಹಂಗಾಮಿ ನಿರ್ದೇಶಕಿ ಡಾ.ಅನಿತಾ ಕರುಣ್, ಸಿಪಿಸಿಆರ್ಐ ಅಡಿಕೆ ಬೆಳೆಯ ಬಗ್ಗೆ ಅಧ್ಯಯನ ಮಾಡಿದರೆ ಕ್ಯಾಂಪ್ಕೋ ಅಡಿಕೆ ಮಾರುಕಟ್ಟೆ ಬಗ್ಗೆ ಹಾಗೂ ಕೃಷಿಕರ ಸಮಗ್ರ ಅಭಿವೃಧ್ಧಿಯ ಬಗ್ಗೆ ಚಿಂತನೆ ಮಾಡುತ್ತಿದೆ. ಕ್ಯಾಂಪ್ಕೋ ಜೊತೆಗೆ ಸದಾ ಸಹಕಾರಕ್ಕೆ ಸಿದ್ಧ ಎಂದರು.
ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಮಾಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು ಗ್ರಾಮೀಣ ಭಾಗದಲ್ಲೂ ಸಹಕಾರಿ ಸಂಘಗಳ ಸಹಕಾರದೊಂದಿಗೆ ಇಂತಹ ಶಿಬಿರಗಳು ನಡೆಯಬೇಕು ಎಂದರು. ಕಾಸರಗೋಡು ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಜಯದೇವ ಖಂಡಿಗೆ ಜೀವವಿಮೆ ಪತ್ರ ವಿತರಿಸಿದರು. ಪೆರ್ಲ ಸಿ.ಎ.ಬ್ಯಾಂಕ್ ಅಧ್ಯಕ್ಷ ವೆಂಕಟರಮಣ ಭಟ್, ಪ್ರಗತಿಪರ ಕೃಷಿಕ ಬದನಾಜೆ ಶಂಕರ ಭಟ್, ಮಂಚಿ ಶ್ರಿನಿವಾಸ್ ಆಚಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ಯಾಂಪ್ಕೋ ಉಪಾಧ್ಯಕ್ಷ, ಶಿಬಿರ ನಿಶಕ ಶಂಕರನಾರಾಯಣ ಭಟ್ ಖಂಡಿಗ ಶಿಬಿರಾವಲೋಕನ ನಡೆಸಿದರು.  ಶಿಬಿರಾರ್ಥಿಗಳಾದ ನವೀನ್ಪ್ರಕಾಶ್ ಉಜಿರೆ , ಶಿವಪ್ರಸಾದ್ ಆಲೆಟ್ಟಿ, ಸಂದೀಪ್ , ಸಚಿನ್ ಸಿ , ಗೋವಿಂದರಾಜ್ ಅನಿಸಿಕೆ ವ್ಯಕ್ತಪಡಿಸಿದರು.
ಅಡಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಸ್ವಾಗತಿಸಿ, ಪ್ರಸ್ತಾವನೆಗೈದರು. ಎ.ಆರ್.ಡಿ.ಎಫ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೇಶವ ಭಟ್ ವಂದಿಸಿದರು. ಕ್ಯಾಂಪ್ಕೊ ಸಂಸ್ಥೆಯ ಉದ್ಯೋಗಿ ಕಿಶನ್ ಪಳ್ಳತ್ತಡ್ಕ ನಿರೂಪಣೆ ಮಾಡಿದರು.

 

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕುಂಭಮೇಳದಲ್ಲಿ ಕಾಲ್ತುಳಿತ : ಮೃತಪಟ್ಟ ಭಕ್ತರಿಗೆ ಕಿಶೋರ್ ಕುಮಾರ್ ಪುತ್ತೂರು ತೀವ್ರ ಸಂತಾಪ

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟಂಬದವರಿಗೆ ಭಗವಂತ ನೀಡಲಿ ಎಂದು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್...

ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

ಮಂಗಳೂರು: 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ಸೋಂಕು ಪತ್ತೆ ಆಗಿದೆ. ಆ ಮೂಲಕ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣವಾಗಿದೆ. ದುಬಾೖಯಿಂದ ಜ.17ರಂದು ಹಿಂದಿರುಗಿದ್ದ 40 ವರ್ಷದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್‌ ರೋಗ ಲಕ್ಷಣಗಳು...