ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಬಂಟ್ವಾಳ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಸ್ತ್ರೀ ಶಕ್ತಿ ಗೊಂಚಲು ಗುಂಪುಗಳ ಬಲವರ್ಧನೆಗೆ ಸದಸ್ಯರಿಗೆ ಪುನಶ್ಚೇತನ ತರಬೇತಿ ಕಾರ್ಯಕ್ರಮ ಸ್ತ್ರೀ ಶಕ್ತಿಭವನ ಬಿ.ಸಿ.ರೋಡ್ ಇಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಬಲಾಢ್ಯಗೊಂಡಾಗ ಪ್ರತಿ ಮನೆಯೂ ಆರ್ಥಿಕವಾಗಿ ಸಬಲವಾಗುತ್ತದೆ ಎಂದರು.
ಮಹಿಳೆಯರ ಗುಂಪುಗಳು ಸಕ್ರಿಯವಾಗಿ, ಬೆಳೆಯುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳು ಅವಶ್ಯ ಎಂಬ ನಿಟ್ಟಿನಲ್ಲಿ ಸರಕಾರ ಆಯೋಜನೆ ಮಾಡಿದೆ.
ಎಲ್ಲಾ ಸದಸ್ಯರು ಇದರ ಪ್ರಯೋಜನ ಪಡೆದು ಇತರರಿಗೆ ಪ್ರೇರಣೆಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ, ರಾಜಕೀಯವಾಗಿ ಸಬಲೀಕರಣಕ್ಕೆ ಸ್ತ್ರೀ ಶಕ್ತಿ ಒಕ್ಕೂಟ ಸಹಕಾರಿಯಾಗಿದೆ ಎಂದರು. ಮನೆಯ ಜವಬ್ದಾರಿಯ ಜೊತೆ ಸಂಘಟನೆಯ ಮೂಲಕ ಸಂಘಟನಾತ್ಮಕವಾಗಿ ಬೆಳೆಯುವ ಕ್ರಾಂತಿಕಾರಕ ಬದಲಾವಣೆಗೆ ಸರಕಾರ ಚಿಂತಿಸಿ ಈ ಸವಲತ್ತುಗಳನ್ನು ನೀಡಿದೆ.
ಇಚ್ಛಾಶಕ್ತಿಯ ಮೂಲಕ ಆರ್ಥಿಕವಾಗಿ ಬೆಳೆಯಲು ಸರಕಾರ ನೀಡಿದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಅವರು ಹೇಳಿದರು.


ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಾತನಾಡಿ ಕಾರ್ಯಕ್ರಮಗಳ ಮೂಲಕ ಇತರ ತಾಲೂಕಿಗೆ ಮಾದರಿಯಾಗಿ ಕೆಲಸ ನಿರ್ವಹಣೆ ಮಾಡುವ ಇಲಾಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ. ಬಂಗೇರ, ತಾಲೂಕು ಪಂಚಾಯತ್ ಸದಸ್ಯ ಮಲ್ಲಿಕಾ ಶೆಟ್ಟಿ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ರೇವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಸ್ವಾಗತಿಸಿ,
ಮೇಲ್ವಿಚಾರಕಿ ಶಾಲಿನಿ ವಂದಿಸಿದರು.
ಹಿರಿಯ ಮೇಲ್ವಿಚಾರಕಿ ಭಾರತಿ ಬಿ. ಕಾರ್ಯಕ್ರಮ ನಿರೂಪಿಸಿದರು.