Sunday, July 13, 2025

ಆ.16 ರಂದು ಅಮ್ಮುಂಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ

ಬಂಟ್ವಾಳ: ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ನಿರ್ದೇಶನದಂತೆ ತಹಶೀಲ್ದಾರ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆ.16 ರಂದು ಅಮ್ಮುಂಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಲಿದೆ ಎಂದು ತಹಶೀಲ್ದಾರ್ ಕಚೇರಿ ಪ್ರಕಟನೆ ತಿಳಿಸಿದೆ.
ಅ.16 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತಹಶೀಲ್ದಾರ್ ರಶ್ಮಿ ಎಸ್. ಆರ್.ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮ ದಲ್ಲಿ ವಾಸ್ತವ್ಯ ಹೂಡಲಿದ್ದು, ಈ ಕಾರ್ಯಕ್ರಮ ದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖಾ ಅಧಿಕಾರಿಗಳು ಉಪಸ್ಥಿತರಿರುವವರು.
ಕಂದಾಯ ಇಲಾಖೆ ಹಾಗೂ ಇತರ ಇಲಾಖೆ ಗಳ ಸವಲತ್ತುಗಳನ್ನು ವಿತರಿಸುವ ಕಾರ್ಯಕ್ರಮ ಕೂಡ ಇದೆ ಎಂದು ಅವರು ತಿಳಿಸಿದ್ದಾರೆ.
ಜೊತೆಗೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಇಲ್ಲಿ ಸಮಾಲೋಚನೆ ಮಾಡಬಹುದು ಎಂದು ತಿಳಿಸಿದ್ದಾರೆ.
ಅಮ್ಮುಂಜೆ ಗ್ರಾಮದ ಯಾವುದಾದರೂ ಅಹವಾಲು ಗಳಿದ್ದರೆ ಅ.14 ರೊಳಗೆ ಗ್ರಾಮ ಪಂಚಾಯತ್ , ದೂರುಪೆಟ್ಟಿಗೆ,ಗ್ರಾಮಲೆಕ್ಕಿಗರಿಗೆ ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸುಲು ಕೋರಿದೆ.

More from the blog

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...

ಶ್ರದ್ಧಾ ನಿಷ್ಠೆಯಿಂದ ಸಾಧನೆ ಸಾಧ್ಯ – ಅಬ್ದುಲ್ ಮಜೀದ್ ಎಸ್

ಬಂಟ್ವಾಳ : ಸಾಧನೆ ಮಾಡಲು ಕೇವಲ ಹೆಚ್ಚಿನ ಅಂಕಗಳನ್ನು ಗಳಿಸುವುದಲ್ಲ.ಹೊರತಾಗಿ ಒಳ್ಳೆಯದಕ್ಕೆ ಅನುಸಾರವಾಗಿರುವುದು,ಗುರು ಹಿರಿಯರ ಆದರ್ಶಗಳನ್ನು ಅನುಸರಿಸುವುದು, ಗೌರವ ಕೊಟ್ಟು ಗೌರವ ಪಡೆದುಕೊಳ್ಳುವುದು,ಶ್ರದ್ಧೆ ಮತ್ತು ನಿಷ್ಠೆಯಿಂದ ನಿತ್ಯದ ಕರ್ತವ್ಯಗಳನ್ನು ನಿಭಾಯಿಸುವುದೇ ಮುಂತಾದ ಅಂಶಗಳನುಸಾರ...