Saturday, July 12, 2025

ಗ್ರಾಮೀಣ ಭಾಗದ ಪ್ರತಿಯೊಂದು ಕ್ರೀಡೆ ಗಳು ಕೂಡಾ ಆರೋಗ್ಯ ವನ್ನು ಕಾಪಾಡುತ್ತದೆ: ತಹಶೀಲ್ದಾರ್ ರಶ್ಮಿ

ಬಂಟ್ವಾಳ: ಎಸ್.ವಿ.ಎಸ್.ಇಂಗ್ಲೀಷ್ ಮಾಧ್ಯಮ ಸ್ಕೂಲ್ ವಿದ್ಯಾಗಿರಿ ಬಂಟ್ವಾಳ ಇಲ್ಲಿನ‌ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನೇಜಿ ನೆಡುವ ಪ್ರಾತ್ಯಕ್ಷಿಕೆ ಮತ್ತು ಕೆಸರು ಗದ್ದೆ ಸ್ಪರ್ಧೆ ವಿದ್ಯಾಗಿರಿ ಗದ್ದೆಯಲ್ಲಿ ನಡೆಯಿತು.

ಬಂಟ್ವಾಳ ತಹಶಿಲ್ದಾರರಾದ ರಶ್ಮಿ ಅವರು ತೆಂಗಿನ ಗರಿಯನ್ನು ಅರಳಿಸುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿ ದ ಅವರು
ಗ್ರಾಮೀಣ ಭಾಗದ ಪ್ರತಿಯೊಂದು ಕ್ರೀಡೆ ಗಳು ಕೂಡಾ ಆರೋಗ್ಯ ವನ್ನು ಕಾಪಾಡುತ್ತದೆ.
ಪ್ರಕೃತಿಯ ಜೊತೆ ಯಲ್ಲಿ ನಾವು ವಿರೋಧ ವ್ಯಕ್ತಪಡಿಸಿದೆ ಹೊಂದಿಕೊಂಡು
ಹೋದಾಗ ಆರೋಗ್ಯ ವಂತರಾಗಿ ಬದುಕು ಸಾಗಿಸಲು ಸಹಾಯ ವಾಗುತ್ತದೆ ಎಂದು ಅವರು ಹೇಳಿದರು.
ಆಧುನಿಕತೆಯ ಮಧ್ಯೆ ನಾವು ಹಳೆಯ ಗ್ರಾಮೀಣ ಬದುಕು ಮರೆತಿದ್ದೇವೆ.
ನಮ್ಮ ಹಿರಿಯರು ಆರೋಗ್ಯ ವಾಗಿ ಸದೃಢ ವಾಗಿರಲು ಕೃಷಿ ಬದುಕು ಕಾರಣವಾಗಿದೆ.
ನಾವು ಹಿಂದಿನ ಕಾಲದಲ್ಲಿ ಆದುನಿಕ ಕೃಷಿಗೆ ತೊಡಗಿಸಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಜೀವನ ಸಾಗಿಸುವ ಎಂದು ಅವರು ಹೇಳಿದರು.
ಮಕ್ಕಳಿಗೆ ಕೃಷಿಯ ಮೇಲೆ ಪ್ರೀತಿ ಬರಬೇಕು, ಪಾಠದ ಜೊತೆಯಲ್ಲಿ ಗ್ರಾಮೀಣ ಬದುಕಿನ ಸವಿಯನ್ನು ಸವಿಯಿರಿ ಎಂಬ ಕಿವಿ ಮಾತು ಹೇಳಿದರು.
ಇವುಗಳ ಜೊತೆಗೆ ಗುರಿ ಸರಿಯಾಗಿರಲಿ ಎಂಬ ಮಾತನ್ನು ಹೇಳಿದರು.

ಪಾಠದ ಜೊತೆಯಲ್ಲಿ ಪಠ್ಯೇತರ ವಿಷಯ ಕ್ಕೆ ವಿಶೇಷ ಒತ್ತು ನೀಡುವ ಈ ಶಾಲೆ, ಪ್ರಥಮವಾಗಿ ತುಳುನಾಡಿನ ಆಚಾರ ವಿಚಾರಗಳನ್ನು ಬಿಂಬಿಸುವ ಜೊತೆಗೆ ಕೃಷಿ ಯ ಬಗ್ಗೆ ಮಕ್ಕಳಿಗೆ ಅರಿವು ಜ್ಞಾನ ಸಿಗಲಿ ಎಂಬ ಉದ್ದೇಶದಿಂದ ಈ ಕಾರ್ಯ ಕ್ರಮ ಏರ್ಪಡಿಸಲಾಗಿದೆ.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಂದಾಯ ನಿರೀಕ್ಷಕ ನವೀನ್, ಶಿಕ್ಷಕ ರಕ್ಷಕ ಸಂಘದ ಆಧ್ಯಕ್ಷ ಶ್ರೀಧರ ಬಿ, ಶಾಲಾ ಆಡಳಿತಾಧಿಕಾರಿ ಐತಪ್ಪ ಪೂಜಾರಿ, ಶಿಕ್ಷಕ ರಕ್ಷಕ ಸಂಘದ ಖಜಾಂಚಿ ಹರಿಶ್ಚಂದ್ರ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಸ್ವಾಗತಿಸಿ, ಶಿಕ್ಷಕ ಹರಿಪ್ರಸಾದ್ ವಂದಿಸಿದರು.
ಶಿಕ್ಷಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮ ಬಳಿಕ ನೇಜಿ ನೆಡುವ ಕಾರ್ಯ ಕ್ರಮಕ್ಕೆ ಅತಿಥಿಗಳಿಂದ ಗದ್ದೆಗೆ ಹಾಲು ಹಾಕುವ ಮೂಲಕ ಚಾಲನೆ ನೀಡಿದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...