Wednesday, February 12, 2025

ಎಸ್.ಡಿ.ಎಂ.ಕಾಲೇಜು : ದಿ ವಾಲ್‌ ಆಫ್‌ ಗುಡ್‌ ವಿಲ್ ಉದ್ಘಾಟನೆ

ಉಜಿರೆ: ಸಮಾಜದಲ್ಲಿಅವಶ್ಯಕತೆಇದ್ದವರಿಗೆ ಬೇಕಾದಉಪಯುಕ್ತ ವಸ್ತುಗಳನ್ನು ಸಂಗ್ರಹಿಸಲು ಹಾಗೂ ಅಗತ್ಯವಿದ್ದವರುಅದನ್ನು ಪಡೆಯಲು ಅನುಕೂಲವಾದ ದಿ ವಾಲ್‌ಆಫ್‌ಗುಡ್‌ವಿಲ್ ಘಟಕವನ್ನು ಶುಕ್ರವಾರ ಉಜಿರೆಯಲ್ಲಿ ಎಸ್.ಡಿ.ಎಂ.ಕಾಲೇಜಿನಲ್ಲಿ ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು.

ದಾನ ನೀಡುವುದು ಪವಿತ್ರವಾದ ಪುಣ್ಯದಕಾಯಕವಾಗಿದ್ದುಯಾವುದೇರೀತಿಯ ಅಹಂ ಇಲ್ಲದೆದಾನ ನೀಡಬೇಕು. ಆಗ ದಾನ ಪಡೆದವರಲ್ಲಿಯೂದೈನ್ಯತೆ ಬರುವುದಿಲ್ಲ. ದೇವರು ನಮಗೆ ಕಣ್ಣಿಗೆಕಾಣದ ಹಾಗೆ ಎಲ್ಲಾ ಸೌಲಭ್ಯಗಳನ್ನು ನೀಡುತ್ತಾರೆಎಂದುಅವರು ಹೇಳಿದರು.
ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿದರು.
ಸೋನಿಯಾವರ್ಮ, ಪ್ರಿಯದರ್ಶಿನಿ, ಶ್ರುತಜಿತೇಶ್, ಪೂರಣ್‌ವರ್ಮ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯ ನಿರ್ವಹಣಾಧಿಕಾರಿ ಶಶಿಧರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ಸತೀಶ್ಚಂದ್ರ, ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಸೋಮಶೇಖರ ಶೆಟ್ಟಿ, ರೋಟರಿಕ್ಲಬ್‌ಅಧ್ಯಕ್ಷಜಯರಾಮ್, ಸುನೀಲ್ ಶೆಣೈ ಮತ್ತುಶ್ರೀಧರ ಕೆ.ವಿ. ಉಪಸ್ಥಿತರಿದ್ದರು.

ಧರ್ಮಸ್ಥಳ ನೌಕರರಿಂದ ಕರಸೇವೆ: 

ಉಜಿರೆ :ಧರ್ಮಸ್ಥಳ ದೇವಸ್ಥಾನದ ನೌಕರ ವೃಂದದವರುಎರಡು ದಿನ ಮಲವಂತಿಗೆ ಮತ್ತುಚಾರ್ಮಾಡಿಗ್ರಾಮದಲ್ಲಿಕರಸೇವೆ ಮಾಡಿ ನೆರೆ ಸಂತ್ರಸ್ತರಿಗೆ ಸಹಕಾರ ನೀಡಿದರು.


ಎರಡು ದಿನಗಳಲ್ಲಿ ಇನ್ನೂರು ಮಂದಿ ನೌಕರರುಕರಸೇವೆ ಮಾಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಕರಸೇವೆಗೆ ಸಂತ್ರಸ್ತರು ಧನ್ಯತೆಯಿಂದ ಕೃತಜ್ಞತೆ ಸಲ್ಲಿಸಿದರು.

 


ನೆರೆ ಸಂತ್ರಸ್ತರಿಗೆ ವಿತರಿಸಲು ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆಯವರು ಸೀರೆಗಳನ್ನು ವಿತರಿಸಲುಸಜ್ಜುಗೊಳಿಸುತ್ತಿರುವುದು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...