Wednesday, June 25, 2025

ಸರ್ವೇಯರ್ ಮನೆಯಿಂದ ಲಕ್ಷಾಂತರ ರೂ‌‌ ಮೌಲ್ಯದ ನಗನಗದು ಕಳವು

ಬಂಟ್ವಾಳ: ಹಗಲುಹೊತ್ತಿನಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವುಗೈದ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಎಸ್.ವಿ.ಎಸ್.ಶಾಲಾ ಬಳಿ ನಡೆದಿದೆ.
ಬಂಟ್ವಾಳ ಬಿ.ಕಸ್ಬಾ ಗ್ರಾಮದ ಎಸ್.ವಿ.ಎಸ್.ಶಾಲಾ ರಸ್ತೆಯ ಭದ್ರಕಾಳಿ ಕಟ್ಟೆಯ ಬಳಿಯಿರುವ ಖಾಸಗಿ ಸರ್ವೇ ಯರ್ ಲೋಹಿತ್ ಎನ್ ಅವರ ಮನೆಗೆ ಯಾರು ಇಲ್ಲದ ವೇಳೆ ನುಗ್ಗಿದ ಕಳ್ಳರು ಮನೆಯೊಳಗೆ ಕೋಣೆಯಲ್ಲಿದ್ದ ಗೊದ್ರೇಜ್ ನ ಬೀಗ ಮುರಿದು ನಗನಗದು ಕಳವು ಮಾಡಿದ್ದಾರೆ.

ಲೋಹಿತ್ ಅವರ ಪತ್ನಿ ವೀಣಾ ಮನೆ ಸಾಮಾಗ್ರಿಗಳನ್ನು ಖರೀದಿ ಮಾಡಲು ಬಂಟ್ವಾಳ ಪೇಟೆಗೆ ಸುಮಾರು 12ರ ಸಮಯ ತೆರಳಿದ ವೇಳೆ ಮನೆ ಕಳವು ನಡೆದಿರಬೇಕು ಎಂದು ಶಂಕಿಸಲಾಗಿದೆ.
ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಾತ್ರಿ ಪಡಿಸಿಕೊಂಡ ಕಳ್ಳರು ಮನೆಗೆ ತಾಗಿಕೊಂಡಿರುವ ಬಚ್ಚಲು ಕೊಟ್ಟಿಗೆಯ ಸಿಮೆಂಟ್ ಸೀಟ್ ತೆಗೆದು ಮನೆಯೊಳಗೆ ನುಗಿದ್ದ ಕಳ್ಳರು ಕಪಾಟಿನಲ್ಲಿದ್ದ ಸುಮಾರು 7.7500 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 7.500 ರೂ ನಗದು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ವೀಣಾ ಅವರು ಮನೆಯಿಂದ ಹೊರಗೆ ಹೋಗುವಾಗ ಗೊಡ್ರೆಜ್ ಬೀಗ ಹಾಕಿ ಬೀಗದ ಕೀಯನ್ನು ಅಲ್ಲೇ ಇಟ್ಟಿದ್ದರು.
ಕಳ್ಳರು ಗೊಡ್ರೆಜ್ ಲ್ಲಿದ್ದ 224 ಗ್ರಾಂ ಚಿನ್ನ, 1150 ಗ್ರಾಂ ಬೆಳ್ಳಿಯ ಅಭರಣ ಹಾಗೂ 7.500 ನಗದನ್ನು ಪಡೆದುಕೊಂಡು ಗೊಡ್ರೆಜ್ ಬೀಗ ಹಾಕಿ ಬೀಗವನ್ನು ಜೊತೆಗೆ ಕೊಂಡು ಹೋಗಿದ್ದಾರೆ.
ಘಟನಾ ಸ್ಥಳಕ್ಕೆ ಎ.ಎಸ್.ಪಿ.ಸೈದುಲು ಅಡಾವತ್, ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ.ನಾಗರಾಜ್, ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಎಸ್.ಐ.ಸುಧಾಕರ ತೋನ್ಸೆ, ನಗರ ಠಾಣಾ ಎಸ್. ಐ.ಚಂದ್ರಶೇಖರ್, ಪ್ರೋಬೆಸನರಿ ಎಸ್.ಐ.ಗಳಾದ ಕುಮಾರ್ ಮತ್ತು ನಾಗೇಶ್ ಎ.ಎಸ್.ಐ.ಸಂಜೀವ, ಎಚ್.ಸಿ.ಗಳಾದ ಸುರೇಶ್ ಪಡಾರ್, ಉದಯ ರೈ, ಲೋಕೇಶ್, ಸಿಬ್ಬಂದಿ ಶ್ರೀಕಾಂತ್, ಧನ್ಯ ಶ್ರೀ, ವಿವೇಕ್ ಬೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಎ.ಎಸ್.ಪಿ.ಈ ಕಳವು ಪ್ರಕರಣ ಪತ್ತೆಹಚ್ಚಲು ವಿಶೇಷ ತಂಡದ ರಚನೆ ಮಾಡಲಾಗಿದೆ ಎಂದು ಡಿ.ಎಸ್.ಪಿ.ತಿಳಿಸಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ಶ್ವಾನದಳದ ಡಿ.ವೈ.ಎಸ್.ಪಿ.ಹಾಗೂ ಸಿಬ್ಬಂದಿ ಗಳು ಬೇಟಿ ಪರಿಶೀಲಿಸಿದ್ದಾರೆ.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...