Saturday, January 31, 2026

ಠಾಣೆಯ ಪಕ್ಕದ ಅಂಗಡಿಯಲ್ಲಿ ಕಳವು

ಬಂಟ್ವಾಳ: ನಗರ ಠಾಣೆ ಹಾಗೂ ಎ.ಎಸ್.ಪಿ. ಪಕ್ಕದಲ್ಲಿರುವ ವಾಣಿಜ್ಯ ಸಂಕೀರ್ಣ ದಲ್ಲಿರುವ ಅಂಗಡಿಗೆ ನುಗ್ಗಿ ಹಣ ಕಳವು ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಬಿಸಿರೋಡಿನ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಕಟ್ಟಡದ ಲ್ಲಿರುವ ಸೆಲೂನ್ ಗೆ ನುಗ್ಗಿದ ಕಳ್ಳವು 18 ಸಾವಿರ ರೂ ಕಳವು ನಡೆದಿದೆ.
ಅಂಗಡಿಯ ಶಟರ್ ಮುರಿದು ಒಳಗೆ ನುಗ್ಗಿದ ಕಳ್ಳರು ಡ್ರವರ್ ನಲ್ಲಿದ್ದ ನಗದು ಕೊಂಡು ಹೋಗಿದ್ದಾರೆ.
ಜೊತೆಗೆ ಈ ಕಟ್ಟಡದ ಲ್ಲಿರುವ ಹೋಟೆಲ್, ಶ್ರೀದೇವಿ ಬಿಲ್ಡರ್ಸ್ , ಹಿಂದುಸ್ತಾನ್ ಸೇಲ್ಸ್ ಅಂಗಡಿ ಗೆ ನುಗ್ಗಿ ಕಳವಿಗೆ ವಿಫಲ ಯತ್ನ ನಡೆದಿದೆ.
ಠಾಣೆಗೆ ಕೂಗಳತೆಯ ದೂರದಲ್ಲಿ ರುವ ಕಟ್ಟಡದಲ್ಲಿ ಕಳವು ನಡೆದಿದೆಯಾದರೆ ಇನ್ನು ಬಿಸಿರೋಡಿನ ಉಳಿದ ಅಂಗಡಿಗಳ ಗತಿ ಏನು ಎಂಬ ಚಿಂತೆ ಸಾರ್ವಜನಿಕ ರಲ್ಲಿ ಉಂಟಾಗಿದೆ.
ನಗರ ಠಾಣಾ ಎಸ್. ಐ.ಚಂದ್ರಶೇಖರ್ ಅಪರಾಧ ವಿಭಾಗದ ಎಸ್. ಐ.ಸುಧಾಕರ ತೋನ್ಸೆ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...