ಬಂಟ್ವಾಳ: ಥ್ರೋಬಾಲ್ ಫೆಡರೇಶನ್ ಆಫ್ ಇಂಡಿಯಾ ಹಾಗೂ ಥ್ರೋಬಾಲ್ ಅಸೋಸಿಯೇಶನ್ ಆಫ್ ಹರಿಯಾಣದ ಸಹಯೋಗದಲ್ಲಿ ಹರಿಯಾಣದ ರೋಥಕ್ ನಲ್ಲಿರುವ ಎಂ.ಡಿ.ವಿಶ್ವವಿದ್ಯಾನಿಲಯದಲ್ಲಿ ನಡೆದ ರಾಷ್ಟ್ರಮಟ್ಟದ ಥ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ತಂಡವು ವಿವಿಧ ಬಹುಮಾನಗಳನ್ನು ಗಳಿಸಿದ್ದು, ಬಂಟ್ವಾಳದ ಭಾಗ್ಯಶ್ರೀಯವರು ಕೂಡ ರಾಜ್ಯ ತಂಡವನ್ನು ಪ್ರತಿನಿಧಿಸಿ ಗೆಲುವಿಗೆ ಕಾರಣರಾಗಿದ್ದಾರೆ.


ಬಂಟ್ವಾಳದ ನಿವೃತ್ತ ಎಎಸ್ಐ ಬಾಲಕೃಷ್ಣ ಹಾಗೂ ಗಾಯತ್ರಿ ದಂಪತಿಗಳ ಪುತ್ರಿಯಾಗಿರುವ ಭಾಗ್ಯಶ್ರೀ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ.
ಈ ಚಾಂಪಿಯನ್ ಶಿಪ್ ನಲ್ಲಿ ರಾಜ್ಯ ತಂಡವು ಅತಿ ಕಿರಿಯ ಬಾಲಕಿಯರ ವಿಭಾಗದಲ್ಲಿ ಪ್ರಥಮ, ಅತಿ ಕಿರಿಯ ಬಾಲಕರ ವಿಭಾಗದಲ್ಲಿ ದ್ವಿತೀಯ, ಹಿರಿಯ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದೆ.
ರಾಜ್ಯ ತಂಡದ ಕ್ರೀಡಾಪಟುಗಳು, ತಂಡದ ತರಬೇತುದಾರರು, ಮೇಲ್ವಿಚಾರಕರನ್ನು ಥ್ರೋಬಾಲ್ ಅಸೋಸಿಯೇಶನ್ ಆಫ್ ಕರ್ನಾಟಕದ ಅಧ್ಯಕ್ಷ ಪ್ರಕಾಶ್ ಇ, ಕಾರ್ಯದರ್ಶಿ ಶರಣ್ ಕುಮಾರ್ ನಾಯಕ್, ಖಜಾಂಚಿ ರಾಜೇಶ್ ಟಿ.ಬಿ. ಮತ್ತು ಅಸೋಸಿಯೇಶನ್ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

