Tuesday, January 27, 2026

ದೇವಸ್ಥಾನದ ಡಬ್ಬಿಯಿಂದ ಕಳವಿಗೆ ಯತ್ನ: ಆರೋಪ

ಮಾನಸಿಕ ಅಸ್ವಸ್ಥನನ್ನು ಮರಕ್ಕೆ ಕಟ್ಟಿ ಹಾಕಿದ ಸ್ಥಳೀಯರು!
ಬಂಟ್ವಾಳ, ಮೇ ೫: ದೇವಸ್ಥಾನದ ಡಬ್ಬಿಯಿಂದ ಹಣವನ್ನು ಕಳವಿಗೆ ಯತ್ನಿಸುತ್ತಿದ್ದ ಎಂಬ ಆರೋಪದ ಮೇರೆಗೆ ಇಲ್ಲಿನ ನಿವಾಸಿಗಳು ಮಾನಸಿಕ ಅಸ್ವಸ್ಥರೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದಲ್ಲಿ ರವಿವಾರ ನಡೆದಿದೆ.
ಇಲ್ಲಿನ ತುಂಬೆಯಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ಶ್ರೀ ಮಹಾಲಿಂಗೆಶ್ವರ ದೇವಸ್ಥಾನದಲ್ಲಿ ಈತ
ಕಳ್ಳತನ ನಡೆಸಲು ಯತ್ನಿಸಿದ್ದ ಎಂಬ ಆರೋಪದ ಮೇರೆಗೆ ಮಂಗಳೂರು ಹೊರವಲಯದ ಅಡ್ಯಾರ್‌ನ ಯುವಕನೋರ್ವನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈತ ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ಹಣವನ್ನು ಎಗರಿಸಿ ಪರಾರಿಯಾಗಲೆತ್ನಿಸಿದಾಗ ಸ್ಥಳೀಯರೊಬ್ಬರು ಗಮನಿಸಿ ಬೆನ್ನಟ್ಟಿದ್ದಾರೆ. ಈ ಸಂದರ್ಭ ಆರೋಪಿಯು ರಸ್ತೆ ದಾಟಿ ಮನೆಯೊಂದಕ್ಕೆ ನುಗಿದ್ದಾಗ ಆತನನ್ನು ಹಿಡಿದು ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು ಎನ್ನಲಾಗಿದೆ. ಬಳಿಕ ಇಲ್ಲಿನ ಕೆಲ ನಿವಾಸಿಗಳು ಸೇರಿ ಆತನನ್ನು ಅಲ್ಲಿಂದ ಕರೆತಂದು ಮರಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
“ಈತನು ವಶಕ್ಕೆ ಪಡೆದುಕೊಂಡಿದ್ದು, ಮನೆಯವರಿಗೆ ಮಾಹಿತಿ ನೀಡಲಾಗಿದೆ. ಈತ ಮಾನಸಿಕ ಅಸ್ವಸ್ಥನೆಂದು ಪರಿಚಯಸ್ಥರು ಮಾಹಿತಿ ನೀಡಿದ್ದಾರೆ. ಬಂದರ್ ಸಹಿತ ಕೆಲ ಸ್ಥಳಗಳಲ್ಲಿ ಕಳವಿಗೆ ಯತ್ನ ಮಾಡಿದ್ದು ಎನ್ನಲಾಗಿದ್ದು, ಈವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಅದಲ್ಲದೆ, ತುಂಬೆಯಲ್ಲಿ ನಡೆದ ಘಟನೆಯ ಬಗ್ಗೆ ದೇವಸ್ಥಾನಕ್ಕೆ ಸಂಬಂಧಪಟ್ಟವರು ದೂರು ನೀಡದ ಹಿನ್ನೆಲೆಯಲ್ಲಿ ಈತನ ಮೇಲೆ ಯಾವುದೇ ಪ್ರಕರಣವನ್ನು ದಾಖಲಿಸಿಲ್ಲ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ರು ತಿಳಿಸಿದ್ದಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...