Thursday, June 26, 2025

ಹೋಟೆಲ್ ತ್ಯಾಜ್ಯವನ್ನು ರಾಷ್ಟೀಯ ಹೆದ್ದಾರಿಗೆ: ಕಾರ್ಯಾಚರಣೆ ಮಾಡಿದ ಅಧಿಕಾರಿಗಳು-ಜನಪ್ರತಿಗಳು

ಬಂಟ್ವಾಳ: ತುಂಬೆ ಪಂಚಾಯತ್ ವ್ಯಾಪ್ತಿಯ ಕಡೆಗೋಳಿಯಲ್ಲಿ ಹೋಟೆಲ್ ತ್ಯಾಜ್ಯವನ್ನು ರಾಷ್ಟೀಯ ಹೆದ್ದಾರಿಗೆ ಬಿಡುವುದರ ವಿರುದ್ಧ ಕಾರ್ಯಾಚರಣೆ ಮಾಡಿದ ಅಧಿಕಾರಿಗಳು-ಜನಪ್ರತಿನಿಽಗಳನ್ನೊಳಗೊಂಡ ತುಂಬೆ ಪಂಚಾಯತ್ ನಿಯೋಗ ತ್ಯಾಜ್ಯ ನೀರನ್ನು ಬಿಡುತ್ತಿದ್ದ ಪೈಪನ್ನು ಮುಚ್ಚಿ ಸೋಕ್‌ಫಿಟ್ ಮಾಡಿ ತ್ಯಾಜ್ಯವನ್ನು ಅದಕ್ಕೆ ಬಿಡುವಂತೆ ಸಲಹೆ ನೀಡಿದೆ.


ಕಾರ್ಯಾಚರಣೆಯ ವೇಳೆ ತಾ.ಪಂ.ಇಒ ರಾಜಣ್ಣ ಸ್ಥಳಕ್ಕೆ ಭೇಟಿ ನೀಡಿ, ಕೊಳಚೆ ನೀರನ್ನು ಯಾರೂ ಕೂಡ ಹೊರಗೆ ಬಿಡುವುದಕ್ಕೆ ಅವಕಾಶವಿಲ್ಲ. ಅದಕ್ಕಾಗಿ ಸೋಕ್‌ಫಿಟ್ ಮಾಡಬೇಕಿದ್ದು, ತುಂಬೆ ಗ್ರಾ.ಪಂ.ಕಡೆಗೋಳಿಯಲ್ಲಿ ಆರಂಭಿಸಿದ ಕಾರ್ಯಾಚರಣೆ ಇಡೀ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಬೇಕಿದೆ ಎಂದರು.
ಪಂಚಾಯತ್ ಅಧ್ಯಕ್ಷ ಪ್ರವೀಣ್ ತುಂಬೆ ಮಾತನಾಡಿ, ಕಡೆಗೋಳಿ ಭಾಗದಲ್ಲಿ ಹೋಟೆಲ್‌ನಿಂದ ತ್ಯಾಜ್ಯವನ್ನು ಹೆದ್ದಾರಿಗೆ ಬಿಡುತ್ತಿರುವುದರಿಂದ ಹೆದ್ದಾರಿಗೆ ಸಾಗುವವರಿಗೆ ತೊಂದರೆಯಾಗುತ್ತಿದೆ. ಪ್ರಾರಂಭದಲ್ಲಿ ಕುಡಿಯುವ ನೀರು ಪೋಲಾಗುತ್ತಿದೆ ಎಂದು ಭಾವಿಸಲಾಗಿತ್ತು. ಆದರೆ ಅದು ಹೋಟೆಲ್ ತ್ಯಾಜ್ಯ ಎಂದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅದನ್ನು ಮುಚ್ಚುವ ಕಾರ್ಯವನ್ನು ಮಾಡಿದ್ದೇವೆ. ಈ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದರು.
ಪಂಚಾಯತ್ ಮಾಜಿ ಅಧ್ಯಕ್ಷ ಮೊಹಮ್ಮದ್ ವಳವೂರು, ಅಭಿವೃದ್ಧಿ ಅಧಿಕಾರಿ ಚಂದ್ರಾವತಿ, ಲೆಕ್ಕ ಸಹಾಯಕಿ ಚಂದ್ರಕಲಾ, ಸದಸ್ಯರಾದ ಗಣೇಶ್ ಸಾಲಿಯಾನ್, ಅಬ್ದುಲ್ ಅಝೀಜ್, ಮೊಹಮ್ಮದ್ ಜಹೂರ್, ಸಿಬಂದಿ ಮೀನಾಕ್ಷಿ, ಪಂಪು ಆಪರೇಟರ್ ಶ್ರೀಧರ್, ಪೊಲೀಸ್ ಇಲಾಖೆಯ ಎಎಸ್‌ಐ ರಮೇಶ್, ಮಾಧವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

More from the blog

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...