Wednesday, February 12, 2025

ಸರ್ವೇ ಕಾರ್ಯಕ್ಕೆ ಅಡ್ಡಿ: ಪರಿಹಾರ ನೀಡಿ ಸರ್ವೇ ನಡೆಸಿ ಎಂದ ರೈತರು.

ತುಂಬೆ: ತುಂಬೆ ಡ್ಯಾಮಿನಲ್ಲಿ 7 ಮೀಟರ್ ನೀರು ಸಂಗ್ರಹಿಸಲು ಮುಳುಗಡೆ ಜಮೀನಿನ ಸರ್ವೆ ಕಾರ್ಯಕ್ಕೆ ನಗರಪಾಲಿಕೆ ವತಿಯಿಂದ ಸರ್ವೇ ಕಾರ್ಯಕ್ಕೆ ಸಜೀಪಮುನ್ನೂರು ಗ್ರಾಮದ ಮಲಾಯಿ ಬೆಟ್ಟು ಪ್ರದೇಶಕ್ಕೆ ಸರ್ವೆ ಸಿಬ್ಬಂದಿಗಳು ಆಗಮಿಸಿದ್ದರು ಬಂಟ್ವಾಳ ತಾಲೂಕು ರೈತ ಸಂಘ ಅಧ್ಯಕ್ಷ ಹಾಗೂ ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಸಂತ್ರಸ್ತ ರೈತರು ಒಟ್ಟು ಸೇರಿ ಸರ್ವೇ ಕಾರ್ಯದಲ್ಲಿ ನಿರತರಾಗಿದ್ದ ಸಿಬ್ಬಂದಿಗಳನ್ನು ಹಿಂದಕ್ಕೆ ಕಳುಹಿಸಿದರು. ಈಗಾಗಲೇ ಐದು ಮೀಟರ್ ಹಾಗೂ 6 ಮೀಟರ್ ನೀರು ಸಂಗ್ರಹಗೊಂಡಾಗ ಸಂತ್ರಸ್ತ ರೈತರಿಗೆ ಎಲ್ಲಾ ದಾಖಲೆಗಳನ್ನು ಒದಗಿಸಿದರು. ಈ ತನಕ ಪರಿಹಾರ ಸಿಕ್ಕಿರುವುದಿಲ್ಲ ಹಾಗೂ ಸರ್ವೆಯ ಬಗ್ಗೆ ಜಮೀನುದಾರರಿಗೆ ಪೂರ್ವ ಮಾಹಿತಿ ನೀಡಿ ಸರ್ವೆಯ ಆದೇಶ ಪತ್ರವನ್ನು ನೀಡಿ ಸರ್ವೇ ಕಾರ್ಯ ನಡೆಸಬೇಕೆಂದು ತಿಳಿಸಲಾಯಿತು. ರೈತ ಮುಖಂಡರಾದ ಲಕ್ಷ್ಮಣ ನರಿಕೊಂಬು, ಸುದೇಶ್ ಮೈಯ್ಯ, ಪಾಣೆಮಂಗಳೂರು ಇದ್ದಿನಬ್ಬ ಕೊಪ್ಪಳ ನಂದಾವರ ಅಣ್ಣಪ್ಪಯ್ಯ ಬುಕಸ ಇಕ್ಬಾಲ್ ಪಡ್ಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯೂಸುಫ್ ಕರಂದಾಡಿ ಶಿವರಾಮ ಬಾ ಸೀತಾಯ ಅದ್ರು ಕು. ಧನಂಜಯ ಶೆಟ್ಟಿ ಪರಾರಿಗುತ್ತು ಪ್ರಸಾದ್ ಶೆಟ್ಟಿ ಧೀರಜ್ ಶೆಟ್ಟಿ ಚಿತ್ರ ಎಸ್. ರೈ, ಅಬ್ದುಲ್ ರಹಿಮಾನ್ ಉದ್ದೊಟ್ಟು ಮೊದಲಾದವರು ಉಪಸ್ಥಿತರಿದ್ದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...