Friday, June 27, 2025

ವರತೆ ಪ್ರದೇಶ ಸೇರಿಸಿ ಸರ್ವೆ ಮಾಡಿ ರೈತರಿಗೆ ಪರಿಹಾರ ನೀಡಿ: ಜಿಲ್ಲಾಧಿಕಾರಿ ಗೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ ಮಾ.1: ತುಂಬೆ ಡ್ಯಾಂನಲ್ಲಿ 6.30 ಮೀಟರ್ ನೀರು ಸಂಗ್ರಹಿಸಲು ಜಿಲ್ಲಾಧಿಕಾರಿಗಳ ಆದೇಶದಂತೆ ಸಭೆ ಜರಗಿಸಿ ಮುಳುಗಡೆ ಭೂಮಿಗೆ ಪರಿಹಾರ ನೀಡಲು ಪ್ರಸ್ತಾವನೆ ತಯಾರಾಗುತ್ತಿದ್ದು ಈ ಬಗ್ಗೆ ಕೇಂದ್ರ ಜಲ ಆಯೋಗದ ನಿರ್ದೇಶನದಂತೆ ವರತೆ ಭೂಮಿಗೂ ನ್ಯಾಯೋಚಿತ ಸೂಕ್ತ ಪರಿಹಾರ ಒದಗಿಸುವುದರ ಮೂಲಕ ರೈತರ ಹಿತಾಸಕ್ತಿಯನ್ನು ಕಾಪಾಡುವಂತೆ ವರತೆ ಪ್ರದೇಶ ಸೇರಿಸಿ 7:30 ಮೀಟರ್ಗೆ ರೈತರ ಸಮಕ್ಷಮ ಸರ್ವೆ ನಡೆಸಿ ರೈತರಿಗೆ ಪರಿಹಾರ ಒದಗಿಸಿ ಕೊಡುವಂತೆ ಲಿಖಿತ ಮನವಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ಉಳಿಪಾಡಿಗುತ್ತು ಇವರಿಗೆ ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎo ಸುಬ್ರಹ್ಮಣ್ಯ ಭಟ್ ಕಾರ್ಯದರ್ಶಿ ಸುದೇಶ್ ಮಯ್ಯ ಸಲ್ಲಿಸಿದರು ಮನವಿಗೆ ಸ್ಪಂದಿಸಿದ ಶಾಸಕರು ದೂರವಾಣಿ ಮೂಲಕ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ವರತೆ ಪ್ರದೇಶ ಸೇರಿಸಿ ಸರ್ವೆ ಮಾಡಿಸಿ ರೈತರಿಗೆ ಪರಿಹಾರ ಒದಗಿಸುವಂತೆ ಸೂಚಿಸಿದರು ಜಿಲ್ಲಾಧಿಕಾರಿಗಳು ವರತೆ ಪ್ರದೇಶ ಸೇರಿಸಿ ಸರ್ವೆ ಮಾಡಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

Bantwal : ಬಂಟ್ವಾಳ ಪುರಸಭೆಯ ವಿಶೇಷ ಸಭೆ : ಪೌರಕಾರ್ಮಿಕರ ವೇತನ ಕುರಿತು ಚರ್ಚೆ..

ಬಂಟ್ವಾಳ : ಪೌರಕಾರ್ಮಿಕರ ವೇತನ ವಿಚಾರಕ್ಕೆ ಸಂಬಂಧಿಸಿದಂತೆ ಪುರಸಭಾ ವಿಶೇಷ ಸಭೆ ಬಂಟ್ವಾಳ ಪುರಸಭಾ ಅಧ್ಯಕ್ಷ ವಾಸು ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಪುರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಿತು. ಪುರಸಭೆಯ ಪೌರಕಾರ್ಮಿಕರ ವಿಶೇಷ ನೇಮಕಾತಿ ಹಾಗೂ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...