Thursday, February 13, 2025

ಕುಡಿಯುವ ನೀರಿಗೆ ಆತಂಕ ಬೇಡ : ಸಚಿವ ಖಾದರ್

ಬಂಟ್ವಾಳ: ಮಂಗಳೂರು  ಮಹಾನಗರ ಪಾಲಿಕೆ ವ್ಯಾಪ್ತಿಯ  ಜನತೆಗೆ  ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರಕಾರ, ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ. ಕುಡಿಯುವ ನೀರಿನ ವಿಚಾರದಲ್ಲಿ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಭಾನುವಾರ ತುಂಬೆ ವೆಂಟೆಡ್ ಡ್ಯಾಂಗೆ ಅಧಿಕಾರಿಗಳ ತಂಡದೊಂದಿಗೆ  ಭೇಟಿ ನೀಡಿ ಡ್ಯಾಂನಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆಯ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತುಂಬೆ ಡ್ಯಾಂನಲ್ಲಿ ಪ್ರಸ್ತುತ 4.9 ಮೀ. ನೀರು ಶೇಖರಣೆ ಇದೆ. ಮೇ 28ರ ವರೆಗೆ ವಾರದಲ್ಲಿ 5 ದಿವಸ ಮಂಗಳೂರಿಗೆ ನೀರು ಪೂರೈಕೆ ಮಾಡಬಹುದಾಗಿದ್ದು, ಈ ಅವಧಿಯ ಮಧ್ಯೆ  ಮಳೆ ಸುರಿದರೆ ಜೂನ್ 15ವರೆಗೆ  ಯಾವುದೇ ಸಮಸ್ಯೆ ಇಲ್ಲದೆ ಕುಡಿಯುವ ನೀರನ್ನು ಪೂರೈಸಬಹುದು  ಎಂದರು.
 ಸದ್ಯಕ್ಕೆ ನೀರು ಪೂರೈಕೆಗೆ ಯಾವುದೇ ರೇಶನಿಂಗ್ ಇಲ್ಲ. ಡ್ಯಾಂ ನಲ್ಲಿ ನೀರಿನ ಮಟ್ಟ ಕುಸಿತವಾಗಿ ಭವಿಷ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಮಾತ್ರ ರೇಶನಿಂಗ್ ಮೂಲಕ ನೀರು ಪೂರೈಕೆಗೆ ಚಿಂತನೆ ನಡೆಸಲಾಗುವುದು, ಶಂಭೂರು ಎಎಂಆರ್ ಡ್ಯಾಂನಲ್ಲಿ ನೀರು ಶೇಖರಣೆಯಾದರೆ ಅಲ್ಲಿಂದ ತುಂಬೆ ಡ್ಯಾಂಗೆ ನೀರನ್ನು ಸರಬರಾಜು ಮಾಡಲಾಗುವುದು.ಜನರು ಕೂಡ ನೀರನ್ನು ಮಿತವಾಗಿ ಬಳಸಿ ಸಹಕಾರ ನೀಡಬೇಕು ಎಂದರು.  ಮಹಾನಗರ ಪಾಲಿಕೆ ವ್ಯಾಪ್ತಿಗೊಳಪಟ್ಟ ತೆರೆದಬಾವಿ ಹಾಗೂ ಬೋರ್‌ವೆಲ್‌ಗಳನ್ನು ಶುದ್ಧೀಕರಣಗೊಳಿಸಿ ಜನರಿಗೆ  ಪ್ರಯೋಜನವಾಗುವಂತೆ ಕ್ರಮ ಕೈಗೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಜನರಿಗೆ   ತೊಂದರೆಯಾಗದಂತೆ ಜಿಲ್ಲಾಡಳಿತ,ಸರಕಾರ ತೀರ್ಮಾನವನ್ನು ತೆಗೆದುಕೊಳ್ಳಲಿದ್ದು,ಜನರು ಮಳೆಗಾಗಿ ದೇವರಲ್ಲಿ ಪ್ರಾರ್ಥಿಸುವಂತೆ ಸಚಿವ ಯು.ಟಿ.ಖಾದರ್ ಮನವಿ ಮಾಡಿದರು‌.
  ಮಹಾನಗರ ಪಾಲಿಕೆ ವ್ಯಾಪ್ತಿಯ ಜನರಿಗೆ  ಕಳೆದ  ವರ್ಷದ ಆಡಳಿತಾವಧಿಯಲ್ಲಿ ತೆಗೆದುಕೊಂಡಿರುವ ಕ್ರಮದ ಫಲವಾಗಿ ಈಗ ಮಂಗಳೂರಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ ಎಂದ ಸಚಿವರು, ಬೆಳೆಯುತ್ತಿರುವ ಮಂಗಳೂರಿನ ಭವಿಷ್ಯದ ದೃಷ್ಟಿಯಿಂದ ತುಂಬೆ ಡ್ಯಾಂನಲ್ಲಿ ಮಂದೆ 7 ಮೀ.ಗೆ.ನೀರು ಶೇಖರಣೆಗೆ ಕ್ರಮ ಕೈಗೊಳ್ಳಲಾಗುವುದು ಈ ನಿಟ್ಟಿನಲ್ಲಿ ಪರಿಸರದ ರೈತರನ್ನು ವಿಶ್ವಾಸಕ್ಕೆ  ತೆಗೆದುಕೊಂಡು ಅವರೊಂದಿಗೂ ಚರ್ಚಿಸಲಾಗುವುದು ಎಂದರು.  174 ಕೋ.ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಜ್ಯಕ್ಕೆ ಮಾದರಿಯಾಗಲಿರುವ ಹರೇಕಳ-ಅಡ್ಯಾರ್ ಡ್ಯಾಂ ಯೋಜನೆಯ ಆಡಳಿತಾತ್ಮಕ ಮಂಜೂರಾತಿಯ  ಹಂತದಲ್ಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ,  ಸಂಸದೀಯ ಕಾರ್ಯದರ್ಶಿ  ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ ಮಾಜಿ ಮೇಯರ್ ಗಳಾದ ಭಾಸ್ಕರ್.ಕೆ, ಶಶಿಧರ್ ಹೆಗ್ಡೆ, ಮಾಜಿ ಸದಸ್ಯರಾದ ನವೀನ್ ಡಿಸೋಜ, ಕಿಶೋರ್ ಹಾಗೂ ಮಹಾನಗರ ಪಾಲಿಕೆಯ ಅದಿಕಾರಿ ಗಳು ಮತ್ತು ಇಂಜಿನಿಯರ್‌ಗಳು ಈ ಸಂದರ್ಭ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...