Monday, January 26, 2026

ಕುಡಿಯುವ ನೀರಿಗೆ ಆತಂಕ ಬೇಡ : ಸಚಿವ ಖಾದರ್

ಬಂಟ್ವಾಳ: ಮಂಗಳೂರು  ಮಹಾನಗರ ಪಾಲಿಕೆ ವ್ಯಾಪ್ತಿಯ  ಜನತೆಗೆ  ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರಕಾರ, ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ. ಕುಡಿಯುವ ನೀರಿನ ವಿಚಾರದಲ್ಲಿ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಭಾನುವಾರ ತುಂಬೆ ವೆಂಟೆಡ್ ಡ್ಯಾಂಗೆ ಅಧಿಕಾರಿಗಳ ತಂಡದೊಂದಿಗೆ  ಭೇಟಿ ನೀಡಿ ಡ್ಯಾಂನಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆಯ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತುಂಬೆ ಡ್ಯಾಂನಲ್ಲಿ ಪ್ರಸ್ತುತ 4.9 ಮೀ. ನೀರು ಶೇಖರಣೆ ಇದೆ. ಮೇ 28ರ ವರೆಗೆ ವಾರದಲ್ಲಿ 5 ದಿವಸ ಮಂಗಳೂರಿಗೆ ನೀರು ಪೂರೈಕೆ ಮಾಡಬಹುದಾಗಿದ್ದು, ಈ ಅವಧಿಯ ಮಧ್ಯೆ  ಮಳೆ ಸುರಿದರೆ ಜೂನ್ 15ವರೆಗೆ  ಯಾವುದೇ ಸಮಸ್ಯೆ ಇಲ್ಲದೆ ಕುಡಿಯುವ ನೀರನ್ನು ಪೂರೈಸಬಹುದು  ಎಂದರು.
 ಸದ್ಯಕ್ಕೆ ನೀರು ಪೂರೈಕೆಗೆ ಯಾವುದೇ ರೇಶನಿಂಗ್ ಇಲ್ಲ. ಡ್ಯಾಂ ನಲ್ಲಿ ನೀರಿನ ಮಟ್ಟ ಕುಸಿತವಾಗಿ ಭವಿಷ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಮಾತ್ರ ರೇಶನಿಂಗ್ ಮೂಲಕ ನೀರು ಪೂರೈಕೆಗೆ ಚಿಂತನೆ ನಡೆಸಲಾಗುವುದು, ಶಂಭೂರು ಎಎಂಆರ್ ಡ್ಯಾಂನಲ್ಲಿ ನೀರು ಶೇಖರಣೆಯಾದರೆ ಅಲ್ಲಿಂದ ತುಂಬೆ ಡ್ಯಾಂಗೆ ನೀರನ್ನು ಸರಬರಾಜು ಮಾಡಲಾಗುವುದು.ಜನರು ಕೂಡ ನೀರನ್ನು ಮಿತವಾಗಿ ಬಳಸಿ ಸಹಕಾರ ನೀಡಬೇಕು ಎಂದರು.  ಮಹಾನಗರ ಪಾಲಿಕೆ ವ್ಯಾಪ್ತಿಗೊಳಪಟ್ಟ ತೆರೆದಬಾವಿ ಹಾಗೂ ಬೋರ್‌ವೆಲ್‌ಗಳನ್ನು ಶುದ್ಧೀಕರಣಗೊಳಿಸಿ ಜನರಿಗೆ  ಪ್ರಯೋಜನವಾಗುವಂತೆ ಕ್ರಮ ಕೈಗೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಜನರಿಗೆ   ತೊಂದರೆಯಾಗದಂತೆ ಜಿಲ್ಲಾಡಳಿತ,ಸರಕಾರ ತೀರ್ಮಾನವನ್ನು ತೆಗೆದುಕೊಳ್ಳಲಿದ್ದು,ಜನರು ಮಳೆಗಾಗಿ ದೇವರಲ್ಲಿ ಪ್ರಾರ್ಥಿಸುವಂತೆ ಸಚಿವ ಯು.ಟಿ.ಖಾದರ್ ಮನವಿ ಮಾಡಿದರು‌.
  ಮಹಾನಗರ ಪಾಲಿಕೆ ವ್ಯಾಪ್ತಿಯ ಜನರಿಗೆ  ಕಳೆದ  ವರ್ಷದ ಆಡಳಿತಾವಧಿಯಲ್ಲಿ ತೆಗೆದುಕೊಂಡಿರುವ ಕ್ರಮದ ಫಲವಾಗಿ ಈಗ ಮಂಗಳೂರಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ ಎಂದ ಸಚಿವರು, ಬೆಳೆಯುತ್ತಿರುವ ಮಂಗಳೂರಿನ ಭವಿಷ್ಯದ ದೃಷ್ಟಿಯಿಂದ ತುಂಬೆ ಡ್ಯಾಂನಲ್ಲಿ ಮಂದೆ 7 ಮೀ.ಗೆ.ನೀರು ಶೇಖರಣೆಗೆ ಕ್ರಮ ಕೈಗೊಳ್ಳಲಾಗುವುದು ಈ ನಿಟ್ಟಿನಲ್ಲಿ ಪರಿಸರದ ರೈತರನ್ನು ವಿಶ್ವಾಸಕ್ಕೆ  ತೆಗೆದುಕೊಂಡು ಅವರೊಂದಿಗೂ ಚರ್ಚಿಸಲಾಗುವುದು ಎಂದರು.  174 ಕೋ.ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಜ್ಯಕ್ಕೆ ಮಾದರಿಯಾಗಲಿರುವ ಹರೇಕಳ-ಅಡ್ಯಾರ್ ಡ್ಯಾಂ ಯೋಜನೆಯ ಆಡಳಿತಾತ್ಮಕ ಮಂಜೂರಾತಿಯ  ಹಂತದಲ್ಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ,  ಸಂಸದೀಯ ಕಾರ್ಯದರ್ಶಿ  ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ ಮಾಜಿ ಮೇಯರ್ ಗಳಾದ ಭಾಸ್ಕರ್.ಕೆ, ಶಶಿಧರ್ ಹೆಗ್ಡೆ, ಮಾಜಿ ಸದಸ್ಯರಾದ ನವೀನ್ ಡಿಸೋಜ, ಕಿಶೋರ್ ಹಾಗೂ ಮಹಾನಗರ ಪಾಲಿಕೆಯ ಅದಿಕಾರಿ ಗಳು ಮತ್ತು ಇಂಜಿನಿಯರ್‌ಗಳು ಈ ಸಂದರ್ಭ ಉಪಸ್ಥಿತರಿದ್ದರು.

More from the blog

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...

ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು – ವಜ್ರದೇಹಿ ಶ್ರೀ

ವಿಟ್ಲ: ಹಿಂದು ಸಮಾಜ ಪ್ರಸಕ್ತ ಪರಿಸ್ಥಿತಿಯಲ್ಲೂ ಎಚ್ಚೆತ್ತುಕೊಳ್ಳದಿದ್ದರೆ ಹಿಂದುಗಳು ಗಂಡಾಂತರ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ಜಾತಿ ಸಮುದಾಯಗಳು ಒಟ್ಟಾಗಿ ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು. ಹೀಗಾದಾಗ ಮಾತ್ರ ರಾಜಕೀಯ ಷಡ್ಯಂತ್ರಗಳನ್ನು ಮೆಟ್ಟಿ ಮುನ್ನಡೆಯ...