Sunday, February 1, 2026

ಪಂಪ್ ಸೆಟ್ ಗೆ ವಿದ್ಯುತ್ ಸಂಪರ್ಕ ಕಡಿತ : ಜಿಲ್ಲಾಡಳಿತದ ವಿರುದ್ದ ರೈತರ ಆಕ್ರೋಶ

ಬಂಟ್ವಾಳ: ತುಂಬೆ ಅಣೆಕಟ್ಡು ಮೇಲ್ಬಾಗದಲ್ಲಿ ಕೃಷಿಗೆ ನದಿನೀರು ಬಳಕೆಗೆ ನಿರ್ಬಂಧಿಸುವ ನಿಟ್ಟಿನಲ್ಲಿ  ಪಂಪ್ ಸೆಟ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಿಲ್ಲಾಧಿಕಾರಿಯವರು ಮೆಸ್ಕಾಂಗೆ ಸೂಚನೆ ನೀಡಿರುವುದನ್ನು ರೈತಸಂಘ ಹಸಿರುಸೇನೆ ಬಂಟ್ವಾಳ ಘಟಕ ಮತ್ತು ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ಥ ರೈತರ ಹೋರಾಟ ಸಮಿತಿ ಖಂಡಿಸಿದೆ. ಜಿಲ್ಲಾಧಿಕಾರಿಯವರ ಈ ಆದೇಶ ರೈತವಿರೋಧಿ ನೀತಿಯಾಗಿದ್ದು, ನಗರದ ನಾಗರಿಕರನ್ನು ಬದುಕಿಸಲು ನದಿ ತೀರದ ರೈತರ ಜೀವನದಲ್ಲಿ ಚೆಲ್ಲಾವಾಡುವುದು ಯಾವ ನ್ಯಾಯ ಎಂದು ತುಂಬೆ ಡ್ಯಾಂ ಸಂತ್ರಸ್ಥ ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ ಸುಬ್ರಹ್ಮಣ್ಯ ಭಟ್ ಪ್ರಶ್ನಿಸಿದ್ದಾರೆ. ಕೃಷಿಯನ್ನೇ ನಂಬಿ ಜೀವನ ನಡೆಸುವ ರೈತರು ತಾವು ಬೆಳಸಿದ ಅಡಕೆ, ತೆಂಗುಕೃಷಿ, ನೀರಿನ ಆಸರೆಯಿಂದ ಫಸಲು ನೀಡುತ್ತದೆ. ಕೃಷಿಗೆ ನೀರುಣಿಸದೆ ಇದ್ದರೆ ಮರವೇ ಸತ್ತು ಹೋಗಲಿದೆ. ಮತ್ತೆ ಗಿಡ ನೆಟ್ಡು ಫಸಲು ಬರಲು 7 ವರ್ಷಗಳು ಕಾಯಬೇಕು ಈ 7 ವರ್ಷದಲ್ಲಾಗುವ ನಷ್ಟವನ್ನು ಭರಿಸಿ ಬಳಿಕ ಈ ರೈತವಿರೋಧಿ ನೀತಿ ಜಾರಿಗೊಳಿಸಲಿ ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಈಗಾಗಲೇ ಡ್ಯಾಂನ ನೀರು ರೈತರ ಹೊಲಗಳಲ್ಲಿ ತುಂಬಿದ್ದು, ಪ್ರಸ್ತುತ ವರ್ಷ ನೆಲಬಾಡಿಗೆ, ಶಾಶ್ವತ ಪರಿಹಾರವನ್ನು ನೀಡದೆ ರೈತರನ್ನು ನಿರ್ಲಕ್ಷಿಸಲಾಗಿದೆ. ಇದೀಗ ಪಂಪ್ ಸೆಟ್ ಗಳ ವಿದ್ಯುತ್ ಕಡಿತಗೊಳಿಸಲು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿರುವುದು ಅಕ್ಷಮ್ಯವಾಗಿದೆ. ರೈತರ ಹಿತಾಸಕ್ತಿಗೆ ಮಾರಕವಾದ ಈ ಆದೇಶವನ್ನು ಹಿಂಪಡೆಯದಿದ್ದರೆ ಜಿಲ್ಲಾಡಳಿದ ವಿರುದ್ದ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಬಹುದು ಎಂದು ಸುಬ್ರಹ್ಮಣ್ಯಭಟ್ ಎಚ್ಚರಿಸಿದ್ದಾರೆ.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...