Thursday, February 13, 2025

ಪಂಪ್ ಸೆಟ್ ಗೆ ವಿದ್ಯುತ್ ಸಂಪರ್ಕ ಕಡಿತ : ಜಿಲ್ಲಾಡಳಿತದ ವಿರುದ್ದ ರೈತರ ಆಕ್ರೋಶ

ಬಂಟ್ವಾಳ: ತುಂಬೆ ಅಣೆಕಟ್ಡು ಮೇಲ್ಬಾಗದಲ್ಲಿ ಕೃಷಿಗೆ ನದಿನೀರು ಬಳಕೆಗೆ ನಿರ್ಬಂಧಿಸುವ ನಿಟ್ಟಿನಲ್ಲಿ  ಪಂಪ್ ಸೆಟ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಿಲ್ಲಾಧಿಕಾರಿಯವರು ಮೆಸ್ಕಾಂಗೆ ಸೂಚನೆ ನೀಡಿರುವುದನ್ನು ರೈತಸಂಘ ಹಸಿರುಸೇನೆ ಬಂಟ್ವಾಳ ಘಟಕ ಮತ್ತು ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ಥ ರೈತರ ಹೋರಾಟ ಸಮಿತಿ ಖಂಡಿಸಿದೆ. ಜಿಲ್ಲಾಧಿಕಾರಿಯವರ ಈ ಆದೇಶ ರೈತವಿರೋಧಿ ನೀತಿಯಾಗಿದ್ದು, ನಗರದ ನಾಗರಿಕರನ್ನು ಬದುಕಿಸಲು ನದಿ ತೀರದ ರೈತರ ಜೀವನದಲ್ಲಿ ಚೆಲ್ಲಾವಾಡುವುದು ಯಾವ ನ್ಯಾಯ ಎಂದು ತುಂಬೆ ಡ್ಯಾಂ ಸಂತ್ರಸ್ಥ ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ ಸುಬ್ರಹ್ಮಣ್ಯ ಭಟ್ ಪ್ರಶ್ನಿಸಿದ್ದಾರೆ. ಕೃಷಿಯನ್ನೇ ನಂಬಿ ಜೀವನ ನಡೆಸುವ ರೈತರು ತಾವು ಬೆಳಸಿದ ಅಡಕೆ, ತೆಂಗುಕೃಷಿ, ನೀರಿನ ಆಸರೆಯಿಂದ ಫಸಲು ನೀಡುತ್ತದೆ. ಕೃಷಿಗೆ ನೀರುಣಿಸದೆ ಇದ್ದರೆ ಮರವೇ ಸತ್ತು ಹೋಗಲಿದೆ. ಮತ್ತೆ ಗಿಡ ನೆಟ್ಡು ಫಸಲು ಬರಲು 7 ವರ್ಷಗಳು ಕಾಯಬೇಕು ಈ 7 ವರ್ಷದಲ್ಲಾಗುವ ನಷ್ಟವನ್ನು ಭರಿಸಿ ಬಳಿಕ ಈ ರೈತವಿರೋಧಿ ನೀತಿ ಜಾರಿಗೊಳಿಸಲಿ ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಈಗಾಗಲೇ ಡ್ಯಾಂನ ನೀರು ರೈತರ ಹೊಲಗಳಲ್ಲಿ ತುಂಬಿದ್ದು, ಪ್ರಸ್ತುತ ವರ್ಷ ನೆಲಬಾಡಿಗೆ, ಶಾಶ್ವತ ಪರಿಹಾರವನ್ನು ನೀಡದೆ ರೈತರನ್ನು ನಿರ್ಲಕ್ಷಿಸಲಾಗಿದೆ. ಇದೀಗ ಪಂಪ್ ಸೆಟ್ ಗಳ ವಿದ್ಯುತ್ ಕಡಿತಗೊಳಿಸಲು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿರುವುದು ಅಕ್ಷಮ್ಯವಾಗಿದೆ. ರೈತರ ಹಿತಾಸಕ್ತಿಗೆ ಮಾರಕವಾದ ಈ ಆದೇಶವನ್ನು ಹಿಂಪಡೆಯದಿದ್ದರೆ ಜಿಲ್ಲಾಡಳಿದ ವಿರುದ್ದ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಬಹುದು ಎಂದು ಸುಬ್ರಹ್ಮಣ್ಯಭಟ್ ಎಚ್ಚರಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...