Tuesday, January 27, 2026

ನಾಟಕ ವೀಕ್ಷಣೆಗೆ ತೆರಳಿದವರ ಮನೆಯನ್ನು ಟಾರ್ಗೆಟ್ ಮಾಡಿ ಕಳವು; ಬಂಟ್ವಾಳ ತಾಲೂಕಿನಲ್ಲಿ ನಡೆದ ಘಟನೆ

ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ನಗದು ಕಳ್ಳತನ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆಯಲ್ಲಿ ನಡೆದಿದೆ.

ತುಂಬೆ ಗ್ರಾಮದ ಮಜಿ ಎಂಬಲ್ಲಿ ನಾಲ್ಕು ಮನೆಗಳಿಗೆ ನುಗ್ಗಿದ ಕಳ್ಳರು ಒಂದು ಮನೆಯಿಂದ ಗೊಡ್ರೆಜ್‌ನಲ್ಲಿರಿಸಿದ್ದ 8 ಸಾವಿರ ರೂ. ನಗದನ್ನು ದೋಚಿಕೊಂಡು ಹೋಗಿದ್ದಾರೆ.

ಇನ್ನುಳಿದ ಮೂರು ಮನೆಗಳಿಗೆ ಮನೆಗೆ ನುಗ್ಗಿದ ಕಳ್ಳರು ಸಂಪೂರ್ಣ ಮನೆಯನ್ನು ಜಾಲಾಡಿದ್ದು ಯಾವುದೇ ವಸ್ತುಗಳು ಸಿಗದ ಕಾರಣ ಬರಿ ಕೈಯಲ್ಲಿ ವಾಪಾಸು ಆಗಿದ್ದಾರೆ.

ಮಜಿ ನಿವಾಸಿ ಮನೋಜ್ ಕೊಟ್ಟಾರಿ ಎಂಬವರ ಮನೆಯ ಹಿಂಬಾಗಿಲ ಚಿಲಕ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಗೊಡ್ರೆಜ್ ನಲ್ಲಿದ್ದ ಎಂಟು ಸಾವಿರ ರೂ. ನಗದನ್ನು ಕಳ್ಳರು ಕಳವು ಮಾಡಿದ್ದಾರೆ ಎಂದು ಅವರು ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಭಾಸ್ಕರ, ರಾಘವ, ಮಾದವ ಎಂಬವರ ಮನೆಗೂ ನುಗ್ಗಿ ಮನೆಯನ್ನು ಜಾಲಾಡಿದ್ದಾರೆ.

ಶಿವದೂತ ಗುಳಿಗ ನಾಟಕ: ತುಂಬೆ ಮಜಿಯಲ್ಲಿ ನಿನ್ನೆ ರಾತ್ರಿ “ಶಿವದೂತ ಗುಳಿಗ” ಎಂಬ ನಾಟಕ ಪ್ರದರ್ಶನ ನಡೆಯುತ್ತಿರುವ ಕಾರಣ ಈ ಪರಿಸರದ ಬಹುತೇಕ ಮನೆಯವರು ನಾಟಕ ವೀಕ್ಷಿಸಲು ಮನೆಗೆ ಬೀಗ ಹಾಕಿ ತೆರಳಿದ್ದರು. ನಾಟಕ ವೀಕ್ಷಿಸಿ ವಾಪಾಸು ಮನೆಗೆ ತೆರಳಿ ನೋಡಿದಾಗ ಮನೆಯ ಬೀಗ ಮುರಿದು ಮನೆಗೆ ಪ್ರವೇಶ ಮಾಡಿರುವುದು ಗಮನಕ್ಕೆ ಬಂದಿದೆ.

ಸ್ಥಳಕ್ಕೆ ಬಂಟ್ವಾಳ ಎಸ್.ಐ. ಪ್ರಸನ್ನ, ಅಪರಾಧ ವಿಭಾಗದ ಎಸ್.ಐ. ಸಂಜೀವ, ಎಚ್.ಸಿ. ಸುರೇಶ್ ಹಾಗೂ ಬೆರಳಚ್ಚು ತಜ್ಞರು, ಶ್ವಾನ ದಳ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...