Monday, February 10, 2025

ಪಂಪ್ ಶೆಡ್‌ ಕೆಡವಿ ನೆಲಸಮ ಗ್ರಾಮ ಪಂಚಾಯತ್‌ ದೂರು

ಬಂಟ್ವಾಳ: ತುಂಬೆ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಪಂಪ್ ನಿರ್ವಹಣೆಯ ಶೆಡ್‌ ಅನ್ನು ಪಂಚಾಯತ್ ಅನುಮತಿ ಪಡೆಯದೇ ಗುತ್ತಿಗೆದಾರೊಬ್ಬರು ಕೆಡವಿ ನೆಲಸಮ ಮಾಡಿದ್ದಾರೆ ಎಂದು ತುಂಬೆ ಗ್ರಾಪಂ ಉಪಾಧ್ಯಕ್ಷ ಪ್ರವೀಣ್ ತುಂಬೆ ಆರೋಪಿಸಿದ್ದಾರೆ.
ಎಂಎಲ್‌ಸಿ ಐವನ್ ಡಿಸೋಜ ಅವರ ಅನುದಾನದಿಂದ ರಾಷ್ಟ್ರೀಯ ಹೆದ್ದಾರಿಯ ತುಂಬೆ ಜಂಕ್ಷನ್ ಬಳಿ ರಿಕ್ಷಾ ಪಾರ್ಕಿಂಗ್ ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದು, ಈ ಬಗ್ಗೆಯು ಪಂಚಾಯತ್‌ನಿಂದ ಯಾವುದೇ ಅನುಮತಿ ಪಡೆದಿರುವುದಿಲ್ಲ. ಇಲ್ಲಿ ರಿಕ್ಷಾ ಪಾರ್ಕಿಂಗ್ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಗ್ರಾ.ಪಂ. ಗಮನಕ್ಕೂ ತಾರದೆ ಹಾಗೂ ಅನುಮತಿ ಪಡೆಯದೇ ರಿಕ್ಷಾ ಪಾರ್ಕಿಂಗ್ ಗುತ್ತಿಗೆ ವಹಿಸಿಕೊಂಡವರು ಮಂಗಳವಾರ ರಾತ್ರಿ ಏಕಾಏಕಿ ಪಂಪ್ ನಿರ್ವಹಣೆಯ ಶೆಡ್‌ಅನ್ನು ಕೆಡವಿ ನೆಲಸಮ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.


ಈ ವಿಚಾರವಾಗಿ ಇಂದು ಬೆಳಿಗ್ಗೆ ಗ್ರಾಪಂ ಸದಸ್ಯರ ಸಹಿತ ಉಪಾಧ್ಯಕ್ಷ ಪ್ರವೀಣ್ ಅವರ ನೇತೃತ್ವದಲ್ಲಿ ತುಂಬೆ ಜಂಕ್ಷನ್‌ನಲ್ಲಿ ಧರಣಿ ನಡೆಯಿತು. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ ಸಹಿತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಹಾಗೂ ಗುತ್ತಿಗೆದಾರರ ನಡುವೆ ಮಾತಿನ ಚಕಮಕಿ ನಡೆಯಿತು. ತಹಶೀಲ್ದಾರ್ ಅವರು ಸ್ಥಳಕ್ಕೆ ಆಗಮಿಸುವಂತೆ ಧರಣಿ ನಿರತರು ಪಟ್ಟು ಹಿಡಿದರು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದರು.
ಮಧ್ಯಾಹ್ನದ ಹೊತ್ತಿಗೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಸ್ಥಳ ಪರಿಶೀಲನೆ ನಡೆಸಿ, ಪಿಡಿಒ ಹಾಗೂ ಪಂ. ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿ, ಈ ಬಗ್ಗೆ ವರದಿ ನೀಡುವಂತೆ ಸೂಚಿಸಿದರು.

ಸಾರ್ವಜನಿಕ ಆಸ್ತಿಯನ್ನು ನಾಶಪಡಿಸಿದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಾಗುವುದು. – ಪ್ರವೀಣ್ ತುಂಬೆ, ಗ್ರಾಪಂ ಉಪಾಧ್ಯಕ್ಷ


ತುಂಬೆ ಗ್ರಾಮಸ್ಥರ ಬಹುಬೇಡಿಕೆಯಾಗಿರುವ ರಿಕ್ಷಾ ಪಾರ್ಕಿಂಗ್ ನಿರ್ಮಾಣಕ್ಕೆ ಎಲ್‌ಎಲ್ಸಿ ಅನುದಾನ ಮಂಜುರಾಗಿದ್ದು, ಇದರ ಕಾಮಗಾರಿಯು ನಡೆಯುತ್ತಿದೆ. ಇದಕ್ಕೆ ಸ್ಥಳೀಯ ವಾಣಿಜ್ಯ ಕಟ್ಟಡ ಮಾಲಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕು ಗ್ರಾ.ಪಂ. ಶೆಡ್ ಕೆಡವಿದ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ. ರಿಕ್ಷಾ ಪಾರ್ಕಿಂಗ್ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿ ಪಂಚಾಯತ್‌ನೊಂದಿಗೆ ಮನವಿ ಮಾಡಲಾಗುವುದು.
-ಅಮೀರ್ ತುಂಬೆ, ಸಾಮಾಜಿಕ ಹೋರಾಟಗಾರ

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಪಿಡಿಒ ಹಾಗೂ ಪಂಚಾಯತ್ ಅಧ್ಯಕ್ಷರೊಂದಿಗೆ ವರದಿ ನೀಡುವಂತೆ ತಿಳಿಸಿದ್ದೇನೆ. ಅದಲ್ಲದೆ, ಗ್ರಾಪಂನ ದೂರಿನ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.
-ಪುರಂದರ ಹೆಗ್ಡೆ, ತಹಶೀಲ್ದಾರ್

More from the blog

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳಿಂದ 2 ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಮೇರೆಗೆ ಫೆ. 10 ರಿಂದ ಬೆಳ್ತಂಗಡಿಯಲ್ಲಿ...