Tuesday, February 11, 2025

ತುಮುಲ ಕಿರುಚಿತ್ರ ಫೆ.15 ರಂದು ಬಿಡುಗಡೆ

ಬಂಟ್ವಾಳ : ಎಸ್ 4 ನಿರ್ಮಾಣ ದಲ್ಲಿ ಮೂಡಿಬರುತ್ತಿರುವ ಕಿರುಚಿತ್ರ *ತುಮುಲ* ಬಿಡುಗಡೆಗೆ ಸಿದ್ಧಗೊಂಡಿದೆ.

ರಕ್ತ ಸಂಬಂಧ ದಲ್ಲಿ ಮದುವೆಗಳಾದಾಗ ಉಂಟಾಗುವ ಸಮಸ್ಯೆಯೊಂದನ್ನು ಆಧರಿಸಿದ ಕಥಾವಸ್ತು ತುಮುಲ ಹೊಂದಿದೆ.

ಇದರ ಮುಖ್ಯ ಪಾತ್ರದಲ್ಲಿ ಕೊಂಕಣಿ ಭಾಷೆಯ *ಅಂತು* ಮತ್ತು *ಸಂಸಾರು* ತುಳುಚಿತ್ರ *ದೆಯಿ ಬೈದೆತಿ* ಹಾಗು ಪ್ರಶಸ್ತಿ ವಿಜೇತ ಕಿರುಚಿತ್ರ *ಮೌನಮಾತಾದಾಗ* ಮುಂತಾದವು ಗಳಲ್ಲಿ ನಟಿಸಿರುವ ಸುಬ್ರಹ್ಮಣ್ಯ ಪೈ ನಟಿಸಿದ್ದಾರೆ.
ಇವರೊಂದಿಗೆ ವಂದಿತ ಕುಡ್ವ, ಕೃತಿ ಕಾರಂತ್ ವೀಣಾ ಪಂಡಿತ್ ಶ್ರುತಿ ಸುವರ್ಣ ಶಿವಶಂಕರ ಮಯ್ಯ ಅಭಿನಯಿಸಿದ್ದಾರೆ. *ಪಡ್ಡಾಯಿ* ಖ್ಯಾತಿಯ ಸದಾಶಿವ ನೀನಾಸಂ ಇವರ ನಿರ್ದೇಶನ ಸಹಕಾರವಿದೆ. ತಾಂತ್ರಿಕ ನಿರ್ವಹಣೆ ಬಾಲಸುಬ್ರಹ್ಮಣ್ಯ ನೂಜಿ, ಶಶಿಕುಮಾರ್ ಮತ್ತು ಸತೀಶ್ ಬಿ. ಸಾಹಿತ್ಯ ಅನುಶ್ರೀ ಪುತ್ತೂರಾಯ ಅವರದ್ದು.
ಹಲವಾರು ಭಾಷೆಗಳ ಸಿನಿಮಾಗಳಿಗೆ ಸಂಗೀತ ಸಂಯೋಜಕರಾಗಿರುವ ಯುವ ಗಾಯಕ ನಕುಲ್ ಅಭ್ಯಂಕರ್ ರವರ ಸಂಗೀತವಿದೆ.
ಈ ಕಿರುಚಿತ್ರವು ಇದೇ ತಿಂಗಳ 15ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಶಕ್ತಿ ಪ್ರಸಾದ್ ಅಭ್ಯಂಕರ್ ಇವರು ತಿಳಿಸಿದ್ದಾರೆ.

More from the blog

ಬಳ್ಳಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...