Friday, January 30, 2026

ತುಮುಲ ಕಿರುಚಿತ್ರ ಫೆ.15 ರಂದು ಬಿಡುಗಡೆ

ಬಂಟ್ವಾಳ : ಎಸ್ 4 ನಿರ್ಮಾಣ ದಲ್ಲಿ ಮೂಡಿಬರುತ್ತಿರುವ ಕಿರುಚಿತ್ರ *ತುಮುಲ* ಬಿಡುಗಡೆಗೆ ಸಿದ್ಧಗೊಂಡಿದೆ.

ರಕ್ತ ಸಂಬಂಧ ದಲ್ಲಿ ಮದುವೆಗಳಾದಾಗ ಉಂಟಾಗುವ ಸಮಸ್ಯೆಯೊಂದನ್ನು ಆಧರಿಸಿದ ಕಥಾವಸ್ತು ತುಮುಲ ಹೊಂದಿದೆ.

ಇದರ ಮುಖ್ಯ ಪಾತ್ರದಲ್ಲಿ ಕೊಂಕಣಿ ಭಾಷೆಯ *ಅಂತು* ಮತ್ತು *ಸಂಸಾರು* ತುಳುಚಿತ್ರ *ದೆಯಿ ಬೈದೆತಿ* ಹಾಗು ಪ್ರಶಸ್ತಿ ವಿಜೇತ ಕಿರುಚಿತ್ರ *ಮೌನಮಾತಾದಾಗ* ಮುಂತಾದವು ಗಳಲ್ಲಿ ನಟಿಸಿರುವ ಸುಬ್ರಹ್ಮಣ್ಯ ಪೈ ನಟಿಸಿದ್ದಾರೆ.
ಇವರೊಂದಿಗೆ ವಂದಿತ ಕುಡ್ವ, ಕೃತಿ ಕಾರಂತ್ ವೀಣಾ ಪಂಡಿತ್ ಶ್ರುತಿ ಸುವರ್ಣ ಶಿವಶಂಕರ ಮಯ್ಯ ಅಭಿನಯಿಸಿದ್ದಾರೆ. *ಪಡ್ಡಾಯಿ* ಖ್ಯಾತಿಯ ಸದಾಶಿವ ನೀನಾಸಂ ಇವರ ನಿರ್ದೇಶನ ಸಹಕಾರವಿದೆ. ತಾಂತ್ರಿಕ ನಿರ್ವಹಣೆ ಬಾಲಸುಬ್ರಹ್ಮಣ್ಯ ನೂಜಿ, ಶಶಿಕುಮಾರ್ ಮತ್ತು ಸತೀಶ್ ಬಿ. ಸಾಹಿತ್ಯ ಅನುಶ್ರೀ ಪುತ್ತೂರಾಯ ಅವರದ್ದು.
ಹಲವಾರು ಭಾಷೆಗಳ ಸಿನಿಮಾಗಳಿಗೆ ಸಂಗೀತ ಸಂಯೋಜಕರಾಗಿರುವ ಯುವ ಗಾಯಕ ನಕುಲ್ ಅಭ್ಯಂಕರ್ ರವರ ಸಂಗೀತವಿದೆ.
ಈ ಕಿರುಚಿತ್ರವು ಇದೇ ತಿಂಗಳ 15ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಶಕ್ತಿ ಪ್ರಸಾದ್ ಅಭ್ಯಂಕರ್ ಇವರು ತಿಳಿಸಿದ್ದಾರೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...