Saturday, July 12, 2025

ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಗಿಸಿ: ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ

ಬಂಟ್ವಾಳ: 14 ನೇ ಹಣಕಾಸು ಯೋಜನೆ ಯ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷ ತೆಯಲ್ಲಿ ಬಿಸಿರೋಡಿನ ಎಸ್.ಜಿ.ಎಸ್.ವೈ.ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
2015-16 ನೇ ಸಾಲಿನಿಂದ 2019-20 ಸಾಲಿನವರೆಗೆ 14 ನೇ ಹಣಕಾಸು ಯೋಜನೆ ಯ ಅನುದಾನವು ಈಗಾಗಲೇ ಗ್ರಾಮ ಪಂಚಾಯತ್ ಖಾತೆಗೆ ಬಿಡುಗಡೆ ಯಾಗಿದ್ದು , ಅನುದಾನವನ್ನು ಸಂಪೂರ್ಣ ವಾಗಿ ವೆಚ್ಚ ಭರಿಸದೇ ಇರುವ ಬಗ್ಗೆ ತಾ.ಪಂ.ಅಧ್ಯಕ್ಷ ರ ನೇತ್ರತ್ವದಲ್ಲಿ ಸಭೆ ನಡೆಸಲಾಯಿತು.
ಶೀಘ್ರವಾಗಿ ಉಳಿದಿರುವ ಕಾಮಗಾರಿಗಳನ್ನು ನಡೆಸಿ ಬಿಲ್ ನೀಡುವಂತೆ ಪಿ.ಡಿ.ಒ.ಹಾಗೂ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ತಿಳಿಸಿದರು.
ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಮುಗಿಸಿ, ಯೋಜನೆಗಳಿಗೆ ಸರಕಾರದಿಂದ ಬರುವ ಅನುದಾನ ಗಳ ಬಳಕೆ ಮಾಡಿ ಎಂದು ಅವರು ತಿಳಿಸಿದರು.
ಸಭೆಗೆ ಬರುವ ವೇಳೆ ಸ್ಪಷ್ಟವಾದ ಎಲ್ಲಾ ಮಾಹಿತಿ ಮತ್ತು ದಾಖಲೆಗಳು ತರಬೇಕು ಕಾಟಾಚಾರಕ್ಕೆ ಸಭೆಗೆ ಬಂದು ಸಮರ್ಪಕವಾಗಿ ಉತ್ತರಿಸಲು ಸಾಧ್ಯವಿಲ್ಲ ದೆ ಸಭೆಗೆ ಹಾಜರಾಗಿ ಸಮಯ ವ್ಯರ್ಥ ಮಾಡುವ ಕೆಲಸ ಮಾಡಬೇಡಿ ಎಂದು ತಾ.ಪ.ಇ.ಒ.ರಾಜಣ್ಣ ಪಿ.ಡಿ.ಒಗಳಿಗೆ ಗರಂ ಅಗಿ ಹೇಳಿದರು.
ಸಭೆಗೆ ಹಾಜರಾಗುವ ವೇಳೆ ಪೂರ್ವತಯಾರಿ ಯಿಂದ ಬನ್ನಿ ಎಲ್ಲಾ ಕಾಮಗಾರಿ ಯ ವಿವರ ಸರಿಯಾಗಿ ಇರಬೇಕು ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ ಶೆಟ್ಟಿ, ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ತಾರಾನಾಥ ಸಾಲ್ಯಾನ್ ಉಪಸ್ಥಿತರಿದ್ದರು

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...